<p><strong>ಬಾಗಲಕೋಟೆ:</strong> ತೀವ್ರ ಅನಾರೋಗ್ಯದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಬೇಗನೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಶುಕ್ರವಾರ ಬಾಗಲಕೋಟೆಯ ನವನಗರದ 8ನೇ ಸೆಕ್ಟರ್ನಲ್ಲಿರುವ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.</p>.<p>ಅಖಿಲ ಭಾರತ ಮಧ್ವಮಹಾಮಂಡಳದ ವಸತಿ ನಿಲಯದ ವಿದ್ಯಾರ್ಥಿಗಳು ಶ್ರೀಕೃಷ್ಣ ಪೂಜೆ ನೆರವೇರಿಸಿದರು. ಮಂಡಳದ ಕಾರ್ಯದರ್ಶಿ ಬಿ.ಜೆ. ಮಾಕೋಡ, ವ್ಯವಸ್ಥಾಪಕ ಪ್ರಮೋದಾಚಾರ್ಯ ಆಲೂರ, ಪಂ.ನವೀನಾಚಾರ್ಯ ಜೋಶಿ, ಸಂತೋಷ ಗದ್ದನಕೇರಿ ನೇತೃತ್ವದಲ್ಲಿ ಧನ್ವಂತರಿ ಜಪ, ಸುಳಾದಿಗಳು, ವಾಯುಸ್ತುತಿ, ವಿಷ್ಣುಸಹಸ್ರನಾಮ, ರಾಯರ ಸ್ತೋತ್ರ ಪಾರಾಯಣ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ತೀವ್ರ ಅನಾರೋಗ್ಯದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಬೇಗನೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಶುಕ್ರವಾರ ಬಾಗಲಕೋಟೆಯ ನವನಗರದ 8ನೇ ಸೆಕ್ಟರ್ನಲ್ಲಿರುವ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.</p>.<p>ಅಖಿಲ ಭಾರತ ಮಧ್ವಮಹಾಮಂಡಳದ ವಸತಿ ನಿಲಯದ ವಿದ್ಯಾರ್ಥಿಗಳು ಶ್ರೀಕೃಷ್ಣ ಪೂಜೆ ನೆರವೇರಿಸಿದರು. ಮಂಡಳದ ಕಾರ್ಯದರ್ಶಿ ಬಿ.ಜೆ. ಮಾಕೋಡ, ವ್ಯವಸ್ಥಾಪಕ ಪ್ರಮೋದಾಚಾರ್ಯ ಆಲೂರ, ಪಂ.ನವೀನಾಚಾರ್ಯ ಜೋಶಿ, ಸಂತೋಷ ಗದ್ದನಕೇರಿ ನೇತೃತ್ವದಲ್ಲಿ ಧನ್ವಂತರಿ ಜಪ, ಸುಳಾದಿಗಳು, ವಾಯುಸ್ತುತಿ, ವಿಷ್ಣುಸಹಸ್ರನಾಮ, ರಾಯರ ಸ್ತೋತ್ರ ಪಾರಾಯಣ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>