ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ಮನವಿ ಸಲ್ಲಿಸುವುದಿಲ್ಲ: ಹೆಬ್ಬಾರ ಶ್ರೀವೈಷ್ಣವ ಸಭಾ

Last Updated 16 ಏಪ್ರಿಲ್ 2019, 19:19 IST
ಅಕ್ಷರ ಗಾತ್ರ

ಬೆಂಗಳೂರು: ‘ಹೆಬ್ಬಾರ ಶ್ರೀವೈಷ್ಣವ ಸಭಾಕ್ಕೆ 2019ರ ಮೇ 23ರೊಳಗೆ ಚುನಾವಣೆ ನಡೆಸಲು ಬೆಂಗಳೂರು ನಗರ ಜಿಲ್ಲೆಯ, ಸಂಘಗಳ ಜಿಲ್ಲಾ ನೋಂದಣಾಧಿಕಾರಿಗೆ ಆದೇಶಿಸಿರುವ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಯಾವುದೇ ಮೇಲ್ಮನವಿ ಸಲ್ಲಿಸುವುದಿಲ್ಲ’ ಎಂದು ಸಭಾದ ಅಧ್ಯಕ್ಷ ಎಚ್‌.ಎನ್‌. ರಾಮಪ್ರಸಾದ್‌ ತಿಳಿಸಿದ್ದಾರೆ.

ಈ ವಿಷಯವನ್ನು ‘ಪ್ರಜಾವಾಣಿ’ಗೆ ತಿಳಿಸಿರುವ ಅವರು, ‘ಸಭಾದ ಚುನಾವಣೆಗೆ ಸಂಬಂಧಿಸಿದಂತೆ ಮಾತ್ರವೇ ನಿಗಾ ವಹಿಸಲು ಆಯುಕ್ತರನ್ನು ನಿಯುಕ್ತಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಅದರಂತೆ ನಾವು ಕೋರ್ಟ್‌ ನಿರ್ದೇಶನ ಪಾಲಿಸಲು ಬದ್ಧರಿದ್ದೇವೆ’ ಎಂದು ಹೇಳಿದ್ದಾರೆ.

ಸಭಾದ ತಕರಾರಿಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ವಕೀಲ ಬಿ.ಬಾಲಾಜಿ ಅವರು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಇದೇ 1ರಂದು ವಿಲೇವಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT