<p><strong>ಕೆ.ಆರ್.ಪುರ:</strong> ‘ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಭಾರತಕ್ಕೆ ಮುಕ್ತಿ ಸಿಗಲು ನೇತಾಜಿ ಅವರು ಪ್ರಮುಖ ಪಾತ್ರ ವಹಿಸಿದ್ದರು’ ಎಂದು ವಿಜಿನಾಪುರದ ಕಾಂಗ್ರೆಸ್ನ ಹಿರಿಯ ಮುಖಂಡ ಬಾಬು ಸೇಲ್ವಂ ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ಲಕ್ಷ್ಮಣಮೂರ್ತಿ ಬಡಾವಣೆಯಲ್ಲಿ ಹಮ್ಮಿಕೊಂಡಿದ್ದ ಸುಭಾಷ್ ಚಂದ್ರ ಬೋಸ್ ಅವರ 122ನೇ ಜಯಂತಿ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬೋಸ್ ಅವರು ಭಾರತದ ವೀರ ಸೇನಾನಿ ಮತ್ತು ದಿಟ್ಟ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಸುಭಾಷ್ ಚಂದ್ರ ಬೋಸ್ ಚಿಕ್ಕಂದಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದ ಸೆಳೆತಕ್ಕೆ ಒಳಗಾಗಿ ಚಳವಳಿಗೆ ಧುಮುಕಿದರು’ ಎಂದರು.</p>.<p>ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷದಲ್ಲಿ ಪಾಲ್ಗೊಂಡಿದ್ದ ಕನ್ನಡಿಗ ಸೈನಿಕರಾದ ಜಯರಾಮ್ ಮತ್ತು ಚೌಡಪ್ಪ ಅವರನ್ನು ಸನ್ಮಾನಿಸಲಾಯಿತು ಬೋಸ್ ಜೀವನಾಧಾರಿತ ಪುಸ್ತಕವನ್ನು ವಿತರಿಸಲಾಯಿತು. ಸೆಂಥಿಲ್ ಕುಮಾರ್, ಅಮಾನುಲ್ಲಾ, ಸೆಂಥೀಲ್ ಕುಮಾರ್, ಪ್ರಕಾಶ್, ಹೃದಯನಾಥ್ ನಾಗರಾಜು, ಕೇಶವ್, ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಭಾರತಕ್ಕೆ ಮುಕ್ತಿ ಸಿಗಲು ನೇತಾಜಿ ಅವರು ಪ್ರಮುಖ ಪಾತ್ರ ವಹಿಸಿದ್ದರು’ ಎಂದು ವಿಜಿನಾಪುರದ ಕಾಂಗ್ರೆಸ್ನ ಹಿರಿಯ ಮುಖಂಡ ಬಾಬು ಸೇಲ್ವಂ ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ಲಕ್ಷ್ಮಣಮೂರ್ತಿ ಬಡಾವಣೆಯಲ್ಲಿ ಹಮ್ಮಿಕೊಂಡಿದ್ದ ಸುಭಾಷ್ ಚಂದ್ರ ಬೋಸ್ ಅವರ 122ನೇ ಜಯಂತಿ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬೋಸ್ ಅವರು ಭಾರತದ ವೀರ ಸೇನಾನಿ ಮತ್ತು ದಿಟ್ಟ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ. ಸುಭಾಷ್ ಚಂದ್ರ ಬೋಸ್ ಚಿಕ್ಕಂದಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟದ ಸೆಳೆತಕ್ಕೆ ಒಳಗಾಗಿ ಚಳವಳಿಗೆ ಧುಮುಕಿದರು’ ಎಂದರು.</p>.<p>ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷದಲ್ಲಿ ಪಾಲ್ಗೊಂಡಿದ್ದ ಕನ್ನಡಿಗ ಸೈನಿಕರಾದ ಜಯರಾಮ್ ಮತ್ತು ಚೌಡಪ್ಪ ಅವರನ್ನು ಸನ್ಮಾನಿಸಲಾಯಿತು ಬೋಸ್ ಜೀವನಾಧಾರಿತ ಪುಸ್ತಕವನ್ನು ವಿತರಿಸಲಾಯಿತು. ಸೆಂಥಿಲ್ ಕುಮಾರ್, ಅಮಾನುಲ್ಲಾ, ಸೆಂಥೀಲ್ ಕುಮಾರ್, ಪ್ರಕಾಶ್, ಹೃದಯನಾಥ್ ನಾಗರಾಜು, ಕೇಶವ್, ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>