ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆ ಉಚಿತವಾಗಿ ಭೂಮಿ ಒದಗಿಸುವ ಭರವಸೆ ಹಿಂಪಡೆದಿರುವ ಪ್ರಧಾನಿ ಕಚೇರಿ ಕ್ರಮವನ್ನು ಬೆಂಗಳೂರಿನ ನಾಗರಿಕ ಸಂಘಟನೆಗಳು ಖಂಡಿಸಿವೆ.
ಉಪನಗರ ರೈಲು ಯೋಜನೆಗಾಗಿ ಬೆಂಗಳೂರಿನ ಜನ ಮೂರು ದಶಕಗಳಿಂದ ಕಾಯುತ್ತಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜತೆ ಇತ್ತೀಚೆಗೆ ಸಭೆ ನಡೆಸಿದ್ದ ರೈಲ್ವೆ ಸಚಿವ ಪೀಯೂಷ್ ಗೋಯಲ್ ಅವರು, ಉಚಿತವಾಗಿ ಭೂಮಿ ಒದಗಿಸುವ ಭರವಸೆ ನೀಡಿದ್ದರು.
ಇದೀಗ ‘ಗುತ್ತಿಗೆ ಮೊತ್ತ ಕೂಡ ಯೋಜನಾ ವೆಚ್ಚದ ಭಾಗ’ ಎಂದು ಪ್ರಧಾನಿ ಕಚೇರಿಯಿಂದ ರೈಲ್ವೆ ಮಂಡಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿರುವುದುಬೆಂಗಳೂರಿನ ಜನರಿಗೆ ನಿರಾಸೆ ತಂದಿದೆ ಎಂದು ನಾಗರಿಕ ಸಂಘಟನೆಗಳು ರೈಲ್ವೆ ಅಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಹೇಳಿವೆ.
ಈ ನಿರ್ದೇಶನವನ್ನು ಕೂಡಲೇ ಹಿಂದಕ್ಕೆ ಪಡೆದು ಉಪನಗರ ರೈಲು ಯೋಜನೆ ಆರಂಭಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.