ಬೆಂಗಳೂರು: ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದ್ದಾರೆ.
ಪ್ರತಿಭಟನೆ ನಡೆಸಿದ ರೈತ ಮುಖಂಡರನ್ನು ಮಂಗಳವಾರ ವಿಧಾನಸೌಧಕ್ಕೆ ಕರೆಸಿಕೊಂಡುಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚರ್ಚಿಸಿದರು. ಯಾವುದೇ ಷರತ್ತು ಇಲ್ಲದೆ ರೈತರ ಸಾಲ ಮನ್ನಾ ಮಾಡಬೇಕು. ಕಬ್ಬು ಬಾಕಿ ಹಣ ಕೊಡಿಸಲು ಕ್ರಮ ಕೈಗೊಳ್ಳಬೇಕು, ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವ ವಹಿಸಿದ್ದರು.