ಬೆಂಗಳೂರು: ಪೀಣ್ಯ 2ನೇ ಹಂತದ ‘ಶ್ರೀಗಂಗಾ’ ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಮೌನೇಶ್ (21) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶಿಕಾರಿಪುರದ ಈತ, ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಶುಕ್ರವಾರ ಬೆಳಿಗ್ಗೆಯೇ ನೇಣು ಹಾಕಿಕೊಂಡಿದ್ದು, ಸ್ನೇಹಿತ ಕೊಠಡಿಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ‘ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಪತ್ರ ಬರೆದಿಟ್ಟಿ ರುವುದಾಗಿ ಪೊಲೀಸರು ಹೇಳಿದ್ದಾರೆ.