ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಹತ್ಯೆ; ಸಹೋದರನ ವಿರುದ್ಧ ಎಫ್‌ಐಆರ್‌

Last Updated 28 ಮೇ 2019, 20:13 IST
ಅಕ್ಷರ ಗಾತ್ರ

ಬೆಂಗಳೂರು: ಬಸವನಗುಡಿಯ ಪುಟ್ಟಣ್ಣ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಮಧುಸೂದನ್ ಕವಳೆ (53) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಸ್ಥಳೀಯ ನಿವಾಸಿಯಾದ ಮಧುಸೂದನ್, ನಾಯಿಗಳನ್ನು ಸಾಕಿ ಅವುಗಳನ್ನು ಮಾರಾಟ ಮಾಡುತ್ತಿದ್ದರು. ಅವರ ಪತ್ನಿ ವಿಚ್ಛೇದನ ನೀಡಿ ಪ್ರತ್ಯೇಕವಾಗಿ ವಾಸವಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಆತ್ಮಹತ್ಯೆ ಸಂಬಂಧ ದೂರು ನೀಡಿರುವ ಮಧುಸೂದನ್ ಅವರ ಪುತ್ರ ಅನೂಪ್, ‘ನನ್ನ ತಂದೆಗೆ ಬರಬೇಕಿದ್ದ ಆಸ್ತಿಯನ್ನು ಕೊಡಲು ದೊಡ್ಡಪ್ಪ ರವಿಪ್ರಸಾದ್ ಹಿಂದೇಟು ಹಾಕುತ್ತಿದ್ದರು. ಆ ಸಂಬಂಧ ಕಿರುಕುಳವನ್ನೂ ನೀಡುತ್ತಿದ್ದರು. ಅದೇ ಕಾರಣಕ್ಕೆ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಆರೋಪಿಸಿದ್ದಾರೆ. ರವಿಪ್ರಸಾದ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT