<p><strong>ಹುಬ್ಬಳ್ಳಿ:</strong> ‘ಗ್ರಾಮೀಣ ಭಾಗದ ಮಕ್ಕಳು ಇಂಗ್ಲಿಷ್ ಭಾಷೆ ಕಲಿತು ಕಲಿತು ತಾವೇ ಕಾರ್ಯಕ್ರಮ ನಿರ್ವಹಣೆ ಮಾಡಿದ್ದು ಹೆಮ್ಮೆಯ ಸಂಗತಿ. ಭಾಷೆಯ ಕಲಿಕೆ ಇಂದಿನ ಅಗತ್ಯ’ ಎಂದು ಹುಬ್ಬಳ್ಳಿ ಗ್ರಾಮಾಂತರ ಭಾಗದ ಶಿಕ್ಷಣಾಧಿಕಾರಿ ಎಸ್.ಎಂ. ಹುಡೇದಮನಿ ಹೇಳಿದರು.</p>.<p>ದೇಶಪಾಂಡೆ ಫೌಂಡೇಷನ್ ಆಯೋಜಿಸಿದ್ದ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಬಿರದಲ್ಲಿ ಮಕ್ಕಳಿಗೆ ಇಂಗ್ಲಿಷ್ ಕಲಿಸಿರುವುದು ಶ್ಲಾಘನೀಯ. ದೇಶಪಾಂಡೆ ಫೌಂಡೇಷನ್ ಮಾಡುವ ಇಂತಹ ಕಾರ್ಯಕ್ರಮಗಳಿಗೆ ಶಿಕ್ಷಣ ಇಲಾಖೆ ಸಹ ಕೈಜೋಡಿಸಬೇಕು ಎಂದರು.</p>.<p>‘ಒಂದು ವರ್ಷದಲ್ಲಿ ನಮ್ಮ ಈ ಹಳ್ಳಿಯ ಶಾಲೆಯಲ್ಲಿ ಕಲಿಯಲು ಆಗದ್ದನ್ನು ಒಂದು ತಿಂಗಳ ಬೇಸಿಗೆ ಶಿಬಿರದಲ್ಲಿ ಕಲಿಯಲು ಸಾಧ್ಯವೇ ಎಂದು ನೆನಪಿಸಿಕೊಂಡಾಗ ಆಶ್ಚರ್ಯವಾಯಿತು. ಈ ಬೇಸಿಗೆ ಶಿಬಿರ ನನ್ನ ವ್ಯಕ್ತಿತ್ವ ರೂಪಾಂತರಕ್ಕೆ ಕಾರಣವಾಗಿದೆ. ಮುಂದಿನ ಗುರಿಯ ಬಗ್ಗೆ ಸ್ಪಷ್ಟ ಕಲ್ಪನೆ ಮೂಡಿದೆ’ ಎಂದು ಶಿಬಿರದಲ್ಲಿ ಪಾಲ್ಗೊಂಡಿದ್ದ ಶಿರ್ಕೋಲಿಯ ಶಿಬಿರಾರ್ಥಿ ಅಂಜುಮ ಎಂ. ಬುದ್ದಂಕಾನ್ ಹೇಳಿದರು.</p>.<p>ಹತ್ತನೇ ತರಗತಿ ವಿದ್ಯಾರ್ಥಿ ಗದುಗಿನ ಅಜಿತ್ ಪ್ರಕಾಶ್ ದಾದಾಮಣಿ ಮಾತನಾಡಿ, ‘ಬಹಳ ಸೋಮಾರಿಯಾಗಿದ್ದ ನಾನು ಈಗ ಬಹಳ ಕ್ರಿಯಾಶೀಲನಾಗಿದ್ದೇನೆ. ಹಲವು ವಿಷಯಗಳನ್ನು ತಿಳಿದುಕೊಳ್ಳಲು ಸಹ ಈ ಶಿಬಿರದಿಂದ ಸಾಧ್ಯವಾಯಿತು’ ಎಂದರು.</p>.<p>ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಶಿಬಿರದಲ್ಲಿ ಹುಬ್ಬಳ್ಳಿ ಸುತ್ತಮುತ್ತಲಿನ ಹೆಬ್ಬಾಳ, ತಡಾಸ, ತಿರ್ಲಾಪುರ, ಅಲ್ಲಾನಗರ, ಕಿರೇಸೂಲ್, ಶಿರ್ಕೋಲ್ನ 127 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಬಿರದಲ್ಲಿ ಇಂಗ್ಲಿಷ್, ಗಣಿತ, ಕೌಶಲಾಭಿವೃದ್ದಿ, ಸಮಸ್ಯೆ ಪರಿಹರಿಸುವುದು, ಸಂಘಟನೆ, ಪ್ರದರ್ಶನ, ಅವಿಷ್ಕಾರ ವಿಷಯಗಳ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಲಾಯಿತು.</p>.<p>ದೇಶಪಾಂಡೆ ಫೌಂಡೇಷನ್ ಸಿಇಒ ವಿವೇಕ್ ಪವಾರ್, ಇಸಿಒ ಅಧಿಕಾರಿ ಪಿ.ಎನ್. ನಾಯಕ್, ಎಚ್. ಹರೀಶ್ ಉಪಸ್ಥಿತರಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಗ್ರಾಮೀಣ ಭಾಗದ ಮಕ್ಕಳು ಇಂಗ್ಲಿಷ್ ಭಾಷೆ ಕಲಿತು ಕಲಿತು ತಾವೇ ಕಾರ್ಯಕ್ರಮ ನಿರ್ವಹಣೆ ಮಾಡಿದ್ದು ಹೆಮ್ಮೆಯ ಸಂಗತಿ. ಭಾಷೆಯ ಕಲಿಕೆ ಇಂದಿನ ಅಗತ್ಯ’ ಎಂದು ಹುಬ್ಬಳ್ಳಿ ಗ್ರಾಮಾಂತರ ಭಾಗದ ಶಿಕ್ಷಣಾಧಿಕಾರಿ ಎಸ್.ಎಂ. ಹುಡೇದಮನಿ ಹೇಳಿದರು.</p>.<p>ದೇಶಪಾಂಡೆ ಫೌಂಡೇಷನ್ ಆಯೋಜಿಸಿದ್ದ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಬಿರದಲ್ಲಿ ಮಕ್ಕಳಿಗೆ ಇಂಗ್ಲಿಷ್ ಕಲಿಸಿರುವುದು ಶ್ಲಾಘನೀಯ. ದೇಶಪಾಂಡೆ ಫೌಂಡೇಷನ್ ಮಾಡುವ ಇಂತಹ ಕಾರ್ಯಕ್ರಮಗಳಿಗೆ ಶಿಕ್ಷಣ ಇಲಾಖೆ ಸಹ ಕೈಜೋಡಿಸಬೇಕು ಎಂದರು.</p>.<p>‘ಒಂದು ವರ್ಷದಲ್ಲಿ ನಮ್ಮ ಈ ಹಳ್ಳಿಯ ಶಾಲೆಯಲ್ಲಿ ಕಲಿಯಲು ಆಗದ್ದನ್ನು ಒಂದು ತಿಂಗಳ ಬೇಸಿಗೆ ಶಿಬಿರದಲ್ಲಿ ಕಲಿಯಲು ಸಾಧ್ಯವೇ ಎಂದು ನೆನಪಿಸಿಕೊಂಡಾಗ ಆಶ್ಚರ್ಯವಾಯಿತು. ಈ ಬೇಸಿಗೆ ಶಿಬಿರ ನನ್ನ ವ್ಯಕ್ತಿತ್ವ ರೂಪಾಂತರಕ್ಕೆ ಕಾರಣವಾಗಿದೆ. ಮುಂದಿನ ಗುರಿಯ ಬಗ್ಗೆ ಸ್ಪಷ್ಟ ಕಲ್ಪನೆ ಮೂಡಿದೆ’ ಎಂದು ಶಿಬಿರದಲ್ಲಿ ಪಾಲ್ಗೊಂಡಿದ್ದ ಶಿರ್ಕೋಲಿಯ ಶಿಬಿರಾರ್ಥಿ ಅಂಜುಮ ಎಂ. ಬುದ್ದಂಕಾನ್ ಹೇಳಿದರು.</p>.<p>ಹತ್ತನೇ ತರಗತಿ ವಿದ್ಯಾರ್ಥಿ ಗದುಗಿನ ಅಜಿತ್ ಪ್ರಕಾಶ್ ದಾದಾಮಣಿ ಮಾತನಾಡಿ, ‘ಬಹಳ ಸೋಮಾರಿಯಾಗಿದ್ದ ನಾನು ಈಗ ಬಹಳ ಕ್ರಿಯಾಶೀಲನಾಗಿದ್ದೇನೆ. ಹಲವು ವಿಷಯಗಳನ್ನು ತಿಳಿದುಕೊಳ್ಳಲು ಸಹ ಈ ಶಿಬಿರದಿಂದ ಸಾಧ್ಯವಾಯಿತು’ ಎಂದರು.</p>.<p>ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಶಿಬಿರದಲ್ಲಿ ಹುಬ್ಬಳ್ಳಿ ಸುತ್ತಮುತ್ತಲಿನ ಹೆಬ್ಬಾಳ, ತಡಾಸ, ತಿರ್ಲಾಪುರ, ಅಲ್ಲಾನಗರ, ಕಿರೇಸೂಲ್, ಶಿರ್ಕೋಲ್ನ 127 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಬಿರದಲ್ಲಿ ಇಂಗ್ಲಿಷ್, ಗಣಿತ, ಕೌಶಲಾಭಿವೃದ್ದಿ, ಸಮಸ್ಯೆ ಪರಿಹರಿಸುವುದು, ಸಂಘಟನೆ, ಪ್ರದರ್ಶನ, ಅವಿಷ್ಕಾರ ವಿಷಯಗಳ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಲಾಯಿತು.</p>.<p>ದೇಶಪಾಂಡೆ ಫೌಂಡೇಷನ್ ಸಿಇಒ ವಿವೇಕ್ ಪವಾರ್, ಇಸಿಒ ಅಧಿಕಾರಿ ಪಿ.ಎನ್. ನಾಯಕ್, ಎಚ್. ಹರೀಶ್ ಉಪಸ್ಥಿತರಿದ್ದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>