ಸೇವಾ ಕೇಂದ್ರ ಶುಕ್ರವಾರದವರೆಗೆ (ಅ.18) ಕಾರ್ಯನಿರ್ವಹಿಸಲಿದೆ. ‘ಗ್ರಾಹಕರಿಗೆ ಗುಣಮಟ್ಟದ ಸೇವೆ ದೊರೆಯಬೇಕೆಂಬ ಉದ್ದೇಶ
ದಿಂದ ಸೇವಾ ಕೇಂದ್ರ ಪ್ರಾರಂಭಿಸಲಾಗಿದೆ. ಐಷಾರಾಮಿ ಕಾರುಗಳ ಮಾರಾಟದಲ್ಲಿ ಮೈಲುಗಲ್ಲು ಸ್ಥಾಪಿಸಲಾಗಿದ್ದು, ಪ್ರತಿ ಗ್ರಾಹಕ ಕೂಡ ಸೇವೆಯಿಂದ ತೃಪ್ತಿ ಹೊಂದಬೇಕು. ಈ ನಿಟ್ಟಿನಲ್ಲಿ ಸೇವಾ ಕೇಂದ್ರ ಪ್ರಾರಂಭಿಸಲಾಗಿದ್ದು,ಮರ್ಸಿಡಿಸ್ ಬೆಂಝ್ನ ತಂತ್ರಜ್ಞರು ಕಾರನ್ನು ಪರಿಶೀಲಿಸಿ, ಅಗತ್ಯ ಸಲಹೆ ನೀಡಲಿದ್ದಾರೆ. ಅಷ್ಟೇ ಅಲ್ಲ, ಕಾರಿನಲ್ಲಿ ಸಮಸ್ಯೆಗಳು ಕಾಣಿಸಿಕೊಂಡಲ್ಲಿ ಅದಕ್ಕೆ ಪರಿಹಾರ ಒದಗಿಸಲಿದ್ದಾರೆ’ ಎಂದು ಸುಂದರಂ ಮೋಟರ್ಸ್ನ ಕಾರ್ಯನಿರ್ವಾಹಕ ನಿರ್ದೇಶಕ ಶರತ್ ವಿಜಯರಾಘವನ್ ತಿಳಿಸಿದರು.