ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಗೆ ಜೋಶಿ ಬೆಂಬಲಿಸಿ: ಬಾಬುಗೌಡ ಪಾಟೀಲ

Last Updated 21 ಏಪ್ರಿಲ್ 2019, 12:47 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಸಂಸದ ಪ್ರಹ್ಲಾದ ಜೋಶಿ ಅವರನ್ನು ಮತ್ತೊಮ್ಮೆ ಬೆಂಬಲಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ಕುಂದಗೋಳ ತಾಲ್ಲೂಕು ಸಮಿತಿ ಅಧ್ಯಕ್ಷ ಬಾಬುಗೌಡ ಪಾಟೀಲ ಮನವಿ ಮಾಡಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫಸಲ್ ಬಿಮಾ ಯೋಜನೆಯ ಲಾಭ ಕುಂದಗೋಳ ತಾಲ್ಲೂಕಿನ ಎಲ್ಲ ರೈತರಿಗೆ ಸಿಕ್ಕಿದ್ದರೆ ಅದಕ್ಕೆ ಕಾರಣ ಜೋಶಿ. ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಅವರು, ಕೇಂದ್ರದ ಹಲವಾರು ಯೋಜನೆಗಳ ಲಾಭ ಕ್ಷೇತ್ರದ ಜನರಿಗೆ ಸಿಗುವಂತೆ ಮಾಡಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ ದೇಶದ ಪ್ರಗತಿಗೆ ಕಂಕಣಬದ್ಧರಾಗಿ ದುಡಿಯುತ್ತಿದ್ದಾರೆ ಎಂದರು.

ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಧಾರವಾಡಕ್ಕೆ ಐಐಟಿ ತರಲು ಶ್ರಮಿಸಿದ್ದಾರೆ. ಆದ್ದರಿಂದ ಈ ಬಾರಿಯೂ ಜೋಶಿ ಅವರಿಗೇ ಮತ ನೀಡಿ, ಅಭಿವೃದ್ಧಿ ಕಾರ್ಯಗಳು ಮುಂದುವರೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು. ಮುಖಂಡರಾದ ಮಾರುತಿ ಕಲಘಟಗಿ, ಮುತ್ತು ಚಕಾರಿ, ಯಲ್ಲಪ್ಪ ಶಿಗ್ಗಾಂವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT