ಆದರೆ, 2003ರಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರು ನೋಟಿಫೈ ಮಾಡಿರುವ ವಿಷಯ ಗೊತ್ತಿದ್ದೂ ಶ್ರೀನಿವಾಸನ್ ಅವರಿಂದ ಈ ಭೂಮಿಯನ್ನು ₹ 1.62 ಕೋಟಿ ನೀಡಿ ಖರೀದಿಸಿದ್ದರು. 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ₹ 29 ಕೋಟಿ ಮೌಲ್ಯದ ಭೂಮಿಯನ್ನು ವಸತಿ ಸಮುಚ್ಛಯ ನಿರ್ಮಿಸುವ ಉದ್ದೇಶಕ್ಕೆ ಡಿನೋಟಿಫೈ ಮಾಡಿದ್ದರು.