ಚಿತ್ರದುರ್ಗ: ಬೆಂಗಳೂರಿನ ಪಟೇಲ್ ಪ್ರತಿಷ್ಠಾನವು ಜಾನಪದ ವಿದ್ವಾಂಸ ಡಾ.ಮೀರಾಸಾಬಿಹಳ್ಳಿ ಶಿವಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಸಾಹಿತ್ಯಶ್ರೀ ಪ್ರಶಸ್ತಿಗೆ ಕಥೆಗಾರ ಬಿ.ತಿಪ್ಪಣ್ಣ ಮರಿಕುಂಟೆ ಅವರನ್ನು ಆಯ್ಕೆ ಮಾಡಲಾಗಿದೆ.
ಪಟೇಲ್ ಬೊಮ್ಮೇಗೌಡ ನೆನಪಿನ ‘ತತ್ವಶ್ರೀ ಪ್ರಶಸ್ತಿ’ಯನ್ನು ಸಾಹಿತಿ ಡಾ.ನಟರಾಜ ಬೂದಾಳು ಅವರಿಗೆ ನೀಡಲಾಗಿದೆ ಎಂದು ಪಟೇಲ್ ಪ್ರತಿಷ್ಠಾನದ ಗೌರವ ಅಧ್ಯಕ್ಷಡಿ.ಎಸ್.ಲಿಂಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಮಟ್ಟದ ಈ ಪ್ರಶಸ್ತಿ ಸ್ಮರಣ ಫಲಕ, ಪ್ರಶಸ್ತಿ ಪತ್ರ ಮತ್ತು ತಲಾ ₹10 ಸಾವಿರ ನಗದು ಒಳಗೊಂಡಿದೆ. ಚಳ್ಳಕೆರೆ ತಾಲ್ಲೂಕಿನ ಮೀರಾಸಾಬಿಹಳ್ಳಿ ಶಿವಣ್ಣ ಅವರ ತೋಟದ ಮನೆಯಲ್ಲಿ ಇದೇ 26 ರಂದು ರಾತ್ರಿ 8.30ಕ್ಕೆ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.