<p><strong>ಬೆಂಗಳೂರು:</strong> ‘ಅಭಿವೃದ್ಧಿ ಹಕ್ಕು ವರ್ಗಾವಣೆ‘ (ಟಿಡಿಆರ್) ಪ್ರಕರಣದಲ್ಲಿ ವಂಚನೆಗೆ ಒಳಗಾಗಿದ್ದಾರೆನ್ನಲಾದ ಕೆಲವು ನಿವೇಶನ– ಕಟ್ಟಡಗಳ ಮಾಲೀಕರು ‘ಭ್ರಷ್ಟಾಚಾರ ನಿಗ್ರಹ ದಳ’ಕ್ಕೆ (ಎಸಿಬಿ) ದೂರು ನೀಡದಂತೆ ರಿಯಲ್ ಎಸ್ಟೇಟ್ ಕಂಪೆನಿಗಳು ತಡೆಯುತ್ತಿರುವ ಸಂಗತಿ ಬಯಲಿಗೆ ಬಂದಿದೆ.</p>.<p>ಟಿಡಿಆರ್ ವಂಚನೆ ಪ್ರಕರಣ ಕುರಿತು ನಡೆಯುತ್ತಿರುವ ತನಿಖೆಯಿಂದ ಸಂಕಷ್ಟಕ್ಕೆ ಸಿಕ್ಕಿರುವ ಕೆಲವು ರಿಯಲ್ ಎಸ್ಟೇಟ್ ಕಂಪೆನಿಗಳು ತಮ್ಮಿಂದ ವಂಚನೆಗೊಳಗಾದ ಜನರಿಗೆ ಹಣದ ಆಮಿಷ ಒಡ್ಡುತ್ತಿದ್ದಾರೆ.<br />ಒತ್ತಡಕ್ಕೆ ಮಣಿದರೆ ಮತ್ತೊಮ್ಮೆ ಮೋಸ ಹೋಗುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.</p>.<p>‘ಎಸಿಬಿಯಲ್ಲಿ ದೂರು ದಾಖಲಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗಲು ಬಹಳ ಕಾಲಾವಕಾಶ ಹಿಡಿಯಲಿದೆ. ಅಲ್ಲದೆ,ಹಣವೂ ಕಡಿಮೆ ಸಿಗುತ್ತದೆ. ಹೀಗಾಗಿ, ಈಗಲೇ ನಮ್ಮಿಂದ ಹಣ ತೆಗೆದುಕೊಂಡು ರಾಜಿ ಮಾಡಿಕೊಳ್ಳುವುದು ಸೂಕ್ತ’ ಎಂದು ಕಂಪನಿಗಳು ಸಂತ್ರಸ್ತರ ಮೇಲೆ<br />ಒತ್ತಡ ಹೇರುತ್ತಿವೆ ಎಂದು ಮೂಲಗಳು ಹೇಳಿವೆ.</p>.<p>ರಿಯಲ್ ಎಸ್ಟೇಟ್ ಕಂಪನಿಗಳ ಒತ್ತಡದ ನಡುವೆಯೂ ಸುಮಾರು 15 ಸಂತ್ರಸ್ತರು ಎಸಿಬಿ ಸಂಪರ್ಕಿಸಿ ದೂರು ನೀಡಿದ್ದಾರೆ. ಅವರೆಲ್ಲರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಅವರನ್ನು ಸಾಕ್ಷಿಗಳೆಂದು ಪರಿಗಣಿಸಲಾಗಿದೆ ಎಂದೂ ಮೂಲಗಳು ಸ್ಪಷ್ಟಪಡಿಸಿವೆ.</p>.<p>ಇದು ಕೇವಲ ಅಭಿವೃದ್ಧಿ ಹಕ್ಕು ವರ್ಗಾವಣೆ ಪ್ರಕರಣವಲ್ಲ. ಈ ಪ್ರಕರಣದಲ್ಲಿ ಸುಳ್ಳು ದಾಖಲೆ ಸೃಷ್ಟಿಸಲಾಗಿದೆ. ಕೆಲ ದಾಖಲೆಗಳನ್ನು ತಿದ್ದಲಾಗಿದೆ. ಹೀಗಾಗಿ, ಇದೊಂದು ಗಂಭೀರ ಪ್ರಕರಣವಾಗಿದ್ದು, ತಪ್ಪಿತಸ್ಥರ ಜೊತೆ ಕೈ ಜೋಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದೂ ಎಸಿಬಿ ಅಧಿಕಾರಿಗಳು ಎಚ್ಚರಿಸಿದ್ದಾರೆ ಎನ್ನಲಾಗಿದೆ.</p>.<p>ಇಲ್ಲಿನ ಭಟ್ಟರಹಳ್ಳಿ– ಟಿ.ಸಿ ಪಾಳ್ಯ ರಸ್ತೆ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಕೆಲವು ಕಟ್ಟಡಗಳು ಮತ್ತು ನಿವೇಶನಗಳಿಗೆ ಪರ್ಯಾಯವಾಗಿ ನೀಡಿರುವ ಅಭಿವೃದ್ಧಿ ಹಕ್ಕು ಪ್ರಮಾಣ ಪತ್ರ ದುರ್ಬಳಕೆ ಮಾಡಿಕೊಳ್ಳುವ ಮೂಲಕ ವಂಚನೆ ಎಸಗಿದ ಸಂಬಂಧ ಎಸಿಬಿ ಎಫ್ಐಆರ್ ದಾಖಲಿಸಿದೆ. ಈ ಪ್ರಕರಣದಲ್ಲಿ ಬಿಡಿಎ ಎಇಇ ಕೃಷ್ಣಲಾಲ್ ಸೇರಿದಂತೆ ಅನೇಕರು ಆರೋಪಿಗಳಾಗಿದ್ದಾರೆ. ಕೃಷ್ಣಲಾಲ್ ತಲೆ ಮರೆಸಿಕೊಂಡಿದ್ದಾರೆ.</p>.<p><strong>‘ಮಲ್ಲೇಶ್ವರದಲ್ಲೂ ಟಿಡಿಆರ್ ದುರ್ಬಳಕೆ’</strong></p>.<p>ಮಲ್ಲೇಶ್ವರದಲ್ಲಿ ಮೂಲಸೌಕರ್ಯ ಯೋಜನೆಗೆ ಭೂಮಿ ಸ್ವಾಧೀನಪಡಿಸಿಕೊಂಡ ಪ್ರಕರಣದಲ್ಲೂ ಟಿಡಿಆರ್ ಹಕ್ಕು ದುರ್ಬಳಕೆ ಮಾಡಿರುವ ಪ್ರಕರಣ ಎಸಿಬಿ ಅಧಿಕಾರಿಗಳ ಗಮನಕ್ಕೆ ಬಂದಿದೆ.</p>.<p>ವಿವಿಧ ಇಲಾಖೆಗಳ ಐವರು ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಅವರ ವಿರುದ್ಧವೂ ಪ್ರಕರಣ ದಾಖಲಿಸಲು ಸಕ್ಷಮ ಪ್ರಾಧಿಕಾರದಿಂದ ಒಪ್ಪಿಗೆ ಕೇಳಲಾಗಿದೆ. ಉದ್ದೇಶಪೂರ್ವಕವಾಗಿ ಅನುಮತಿ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಮೂಲಗಳು ವಿವರಿಸಿವೆ.</p>.<p><strong>ವಿಚಾರಣೆಗೆ ಹಾಜರಾದ ದೇವರಾಜ್</strong></p>.<p>ಭಟ್ಟರಹಳ್ಳಿ– ಟಿ.ಸಿ ಪಾಳ್ಯ ರಸ್ತೆ ವಿಸ್ತರಣೆಗೆ ಸ್ವಾಧೀನಪಡಿಸಿಕೊಂಡಿರುವ ಕಟ್ಟಡ–ನಿವೇಶನಗಳ ಟಿಡಿಆರ್ ವಂಚನೆ ಪ್ರಕರಣದಲ್ಲಿ ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್ ದೇವರಾಜ್ ಶನಿವಾರ ಎಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.</p>.<p>ಈ ಪ್ರಕರಣದ ತನಿಖಾಧಿಕಾರಿಗಳು ವಿಚಾರಣೆಗೆ ಕರೆಯುವ ಮೊದಲೇ ದೇವರಾಜ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ‘ಸನಿಹದಲ್ಲೇ ನನಗೆ ಬಡ್ತಿ ಸಿಗಲಿರುವುದರಿಂದ ವಕೀಲರ ಸಲಹೆ ಮೇರೆಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇನೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಬಿಎಂಟಿಎಫ್ ಮುಂದಿರುವ ಎರಡು ಪ್ರಕರಣಗಳಲ್ಲಿ ‘ಬಿ’ ರಿಪೋರ್ಟ್ ಸಲ್ಲಿಕೆಯಾಗಿದೆ ಎಂದೂ ದೇವರಾಜ್ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಭಿವೃದ್ಧಿ ಹಕ್ಕು ವರ್ಗಾವಣೆ‘ (ಟಿಡಿಆರ್) ಪ್ರಕರಣದಲ್ಲಿ ವಂಚನೆಗೆ ಒಳಗಾಗಿದ್ದಾರೆನ್ನಲಾದ ಕೆಲವು ನಿವೇಶನ– ಕಟ್ಟಡಗಳ ಮಾಲೀಕರು ‘ಭ್ರಷ್ಟಾಚಾರ ನಿಗ್ರಹ ದಳ’ಕ್ಕೆ (ಎಸಿಬಿ) ದೂರು ನೀಡದಂತೆ ರಿಯಲ್ ಎಸ್ಟೇಟ್ ಕಂಪೆನಿಗಳು ತಡೆಯುತ್ತಿರುವ ಸಂಗತಿ ಬಯಲಿಗೆ ಬಂದಿದೆ.</p>.<p>ಟಿಡಿಆರ್ ವಂಚನೆ ಪ್ರಕರಣ ಕುರಿತು ನಡೆಯುತ್ತಿರುವ ತನಿಖೆಯಿಂದ ಸಂಕಷ್ಟಕ್ಕೆ ಸಿಕ್ಕಿರುವ ಕೆಲವು ರಿಯಲ್ ಎಸ್ಟೇಟ್ ಕಂಪೆನಿಗಳು ತಮ್ಮಿಂದ ವಂಚನೆಗೊಳಗಾದ ಜನರಿಗೆ ಹಣದ ಆಮಿಷ ಒಡ್ಡುತ್ತಿದ್ದಾರೆ.<br />ಒತ್ತಡಕ್ಕೆ ಮಣಿದರೆ ಮತ್ತೊಮ್ಮೆ ಮೋಸ ಹೋಗುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.</p>.<p>‘ಎಸಿಬಿಯಲ್ಲಿ ದೂರು ದಾಖಲಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗಲು ಬಹಳ ಕಾಲಾವಕಾಶ ಹಿಡಿಯಲಿದೆ. ಅಲ್ಲದೆ,ಹಣವೂ ಕಡಿಮೆ ಸಿಗುತ್ತದೆ. ಹೀಗಾಗಿ, ಈಗಲೇ ನಮ್ಮಿಂದ ಹಣ ತೆಗೆದುಕೊಂಡು ರಾಜಿ ಮಾಡಿಕೊಳ್ಳುವುದು ಸೂಕ್ತ’ ಎಂದು ಕಂಪನಿಗಳು ಸಂತ್ರಸ್ತರ ಮೇಲೆ<br />ಒತ್ತಡ ಹೇರುತ್ತಿವೆ ಎಂದು ಮೂಲಗಳು ಹೇಳಿವೆ.</p>.<p>ರಿಯಲ್ ಎಸ್ಟೇಟ್ ಕಂಪನಿಗಳ ಒತ್ತಡದ ನಡುವೆಯೂ ಸುಮಾರು 15 ಸಂತ್ರಸ್ತರು ಎಸಿಬಿ ಸಂಪರ್ಕಿಸಿ ದೂರು ನೀಡಿದ್ದಾರೆ. ಅವರೆಲ್ಲರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಅವರನ್ನು ಸಾಕ್ಷಿಗಳೆಂದು ಪರಿಗಣಿಸಲಾಗಿದೆ ಎಂದೂ ಮೂಲಗಳು ಸ್ಪಷ್ಟಪಡಿಸಿವೆ.</p>.<p>ಇದು ಕೇವಲ ಅಭಿವೃದ್ಧಿ ಹಕ್ಕು ವರ್ಗಾವಣೆ ಪ್ರಕರಣವಲ್ಲ. ಈ ಪ್ರಕರಣದಲ್ಲಿ ಸುಳ್ಳು ದಾಖಲೆ ಸೃಷ್ಟಿಸಲಾಗಿದೆ. ಕೆಲ ದಾಖಲೆಗಳನ್ನು ತಿದ್ದಲಾಗಿದೆ. ಹೀಗಾಗಿ, ಇದೊಂದು ಗಂಭೀರ ಪ್ರಕರಣವಾಗಿದ್ದು, ತಪ್ಪಿತಸ್ಥರ ಜೊತೆ ಕೈ ಜೋಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದೂ ಎಸಿಬಿ ಅಧಿಕಾರಿಗಳು ಎಚ್ಚರಿಸಿದ್ದಾರೆ ಎನ್ನಲಾಗಿದೆ.</p>.<p>ಇಲ್ಲಿನ ಭಟ್ಟರಹಳ್ಳಿ– ಟಿ.ಸಿ ಪಾಳ್ಯ ರಸ್ತೆ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಂಡಿರುವ ಕೆಲವು ಕಟ್ಟಡಗಳು ಮತ್ತು ನಿವೇಶನಗಳಿಗೆ ಪರ್ಯಾಯವಾಗಿ ನೀಡಿರುವ ಅಭಿವೃದ್ಧಿ ಹಕ್ಕು ಪ್ರಮಾಣ ಪತ್ರ ದುರ್ಬಳಕೆ ಮಾಡಿಕೊಳ್ಳುವ ಮೂಲಕ ವಂಚನೆ ಎಸಗಿದ ಸಂಬಂಧ ಎಸಿಬಿ ಎಫ್ಐಆರ್ ದಾಖಲಿಸಿದೆ. ಈ ಪ್ರಕರಣದಲ್ಲಿ ಬಿಡಿಎ ಎಇಇ ಕೃಷ್ಣಲಾಲ್ ಸೇರಿದಂತೆ ಅನೇಕರು ಆರೋಪಿಗಳಾಗಿದ್ದಾರೆ. ಕೃಷ್ಣಲಾಲ್ ತಲೆ ಮರೆಸಿಕೊಂಡಿದ್ದಾರೆ.</p>.<p><strong>‘ಮಲ್ಲೇಶ್ವರದಲ್ಲೂ ಟಿಡಿಆರ್ ದುರ್ಬಳಕೆ’</strong></p>.<p>ಮಲ್ಲೇಶ್ವರದಲ್ಲಿ ಮೂಲಸೌಕರ್ಯ ಯೋಜನೆಗೆ ಭೂಮಿ ಸ್ವಾಧೀನಪಡಿಸಿಕೊಂಡ ಪ್ರಕರಣದಲ್ಲೂ ಟಿಡಿಆರ್ ಹಕ್ಕು ದುರ್ಬಳಕೆ ಮಾಡಿರುವ ಪ್ರಕರಣ ಎಸಿಬಿ ಅಧಿಕಾರಿಗಳ ಗಮನಕ್ಕೆ ಬಂದಿದೆ.</p>.<p>ವಿವಿಧ ಇಲಾಖೆಗಳ ಐವರು ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಅವರ ವಿರುದ್ಧವೂ ಪ್ರಕರಣ ದಾಖಲಿಸಲು ಸಕ್ಷಮ ಪ್ರಾಧಿಕಾರದಿಂದ ಒಪ್ಪಿಗೆ ಕೇಳಲಾಗಿದೆ. ಉದ್ದೇಶಪೂರ್ವಕವಾಗಿ ಅನುಮತಿ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಮೂಲಗಳು ವಿವರಿಸಿವೆ.</p>.<p><strong>ವಿಚಾರಣೆಗೆ ಹಾಜರಾದ ದೇವರಾಜ್</strong></p>.<p>ಭಟ್ಟರಹಳ್ಳಿ– ಟಿ.ಸಿ ಪಾಳ್ಯ ರಸ್ತೆ ವಿಸ್ತರಣೆಗೆ ಸ್ವಾಧೀನಪಡಿಸಿಕೊಂಡಿರುವ ಕಟ್ಟಡ–ನಿವೇಶನಗಳ ಟಿಡಿಆರ್ ವಂಚನೆ ಪ್ರಕರಣದಲ್ಲಿ ಬಿಬಿಎಂಪಿ ಕಾರ್ಯಪಾಲಕ ಎಂಜಿನಿಯರ್ ದೇವರಾಜ್ ಶನಿವಾರ ಎಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.</p>.<p>ಈ ಪ್ರಕರಣದ ತನಿಖಾಧಿಕಾರಿಗಳು ವಿಚಾರಣೆಗೆ ಕರೆಯುವ ಮೊದಲೇ ದೇವರಾಜ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ‘ಸನಿಹದಲ್ಲೇ ನನಗೆ ಬಡ್ತಿ ಸಿಗಲಿರುವುದರಿಂದ ವಕೀಲರ ಸಲಹೆ ಮೇರೆಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇನೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಬಿಎಂಟಿಎಫ್ ಮುಂದಿರುವ ಎರಡು ಪ್ರಕರಣಗಳಲ್ಲಿ ‘ಬಿ’ ರಿಪೋರ್ಟ್ ಸಲ್ಲಿಕೆಯಾಗಿದೆ ಎಂದೂ ದೇವರಾಜ್ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>