ಇಲ್ಲಿನ ಭಟ್ಟರಹಳ್ಳಿ– ಟಿ.ಸಿ ಪಾಳ್ಯ ರಸ್ತೆ ವಿಸ್ತರಣೆಗೆ ಕವಡೇನಹಳ್ಳಿಯಲ್ಲಿ ಸ್ವಾಧೀನಪಡಿಸಿಕೊಂಡ ಜಮೀನೊಂದರ ಟಿಡಿಆರ್ ವರ್ಗಾವಣೆಯಲ್ಲಿ ಅಕ್ರಮ ನಡೆದಿರುವುದನ್ನು ಬಯಲಿಗೆಳೆದ ಬಳಿಕ ರಿಯಲ್ ಎಸ್ಟೇಟ್ ಏಜೆಂಟರು, ಮಧ್ಯವರ್ತಿಗಳಿಂದ ವಂಚನೆಗೊಳಗಾದ ಕಟ್ಟಡ, ಜಮೀನುಗಳ ಮಾಲೀಕರು ದೂರು ದಾಖಲಿಸಲು ಸ್ವಯಂಪ್ರೇರಣೆಯಿಂದ ಮುಂದೆ ಬರುತ್ತಿದ್ದಾರೆ ಎಂದು ಎಸಿಬಿ ಮೂಲಗಳು ತಿಳಿಸಿವೆ.