ಇದೇ ಮೊದಲ ಬಾರಿಗೆ ಇಂತಹದ್ದೊಂದು ಅವಕಾಶ ನೀಡಲಾಗಿದೆ. ಈಗಾಗಲೇ ಕಲಬುರ್ಗಿ, ಬೀದರ್, ರಾಯಚೂರು ಮುಂತಾದ ಕಡೆಗಳಲ್ಲಿರುವ ಪದವೀಧರ ಪ್ರಾಥಮಿಕ ಶಿಕ್ಷಕರು ತಮಗೆ ಬೇಕಾದ ಜಿಲ್ಲೆಗಳಿಗೆ ಹೋಗಬೇಕು ಎಂಬ ಕಾರಣಕ್ಕೆ ದಾವಣಗೆರೆ, ಮೈಸೂರು, ಬೆಂಗಳೂರು ಇತ್ಯಾದಿ ಕಡೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇದರಿಂದ ಹೊಸ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಅಭ್ಯರ್ಥಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.