ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಗರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಶಿಕ್ಷಕರು ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ಯಾವುದೇ ಷರತ್ತಿಲ್ಲದೆ ನಗದುರಹಿತ ಚಿಕಿತ್ಸೆ ನೀಡಲು ಗುರುತಿನ ಚೀಟಿ ಅಗತ್ಯ. ಇದನ್ನು ಜ್ಯೋತಿ ಸಂಜೀವಿನಿ ಯೋಜನೆಯಡಿ ಅಥವಾ ಪ್ರತ್ಯೇಕವಾಗಿಯೇ ನೀಡಬೇಕು’ ಎಂದರು.