ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸದಸ್ಯ ಕೆ.ಜಿ.ಶ್ರೀನಿವಾಸ್, ‘ವರ್ಗಾವಣೆ ಮಾರ್ಗಸೂಚಿಯನ್ನು ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಬೇಕು. ಪರಸ್ಪರ ವರ್ಗಾವಣೆ, ಗಂಭೀರ ಕಾಯಿಲೆ ಪ್ರಕರಣ, ಪತಿ –ಪತ್ನಿ ಪ್ರಕರಣಗಳ ಕುರಿತು ಅರ್ಜಿ ಸಲ್ಲಿಸಲು ಅಗತ್ಯ ಅರ್ಜಿ ನಮೂನೆಗಳನ್ನು ಪ್ರಕಟಣಾ ಫಲಕದಲ್ಲಿ ಪ್ರದರ್ಶಿಸಬೇಕು’ ಎಂದು ಹೇಳಿದರು.