‘ಮೃತರ ಮನೆಯಲ್ಲಾಗಲೀ, ಕಚೇರಿಯಲ್ಲಾಗಲೀಯಾವುದೇ ಪತ್ರ ಸಿಕ್ಕಿಲ್ಲ. ಮೊಬೈಲ್ ಹಾಗೂ ಲ್ಯಾಪ್ಟಾಪ್ಗಳನ್ನೂ ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದೇವೆ. ‘ಖಿನ್ನತೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಮೃತರ ತಾಯಿ ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ, ಸದ್ಯಕ್ಕೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ’ ಎಂದು ಮಹದೇವಪುರ ಪೊಲೀಸರು ತಿಳಿಸಿದರು.