ಚಿತ್ತೂರಿನ ಭಾಸ್ಕರ್, ನಾಲ್ಕು ವರ್ಷಗಳ ಹಿಂದೆ ನಗರಕ್ಕೆ ಬಂದು ಕೋನಪ್ಪನ ಅಗ್ರಹಾರದಲ್ಲಿ ನೆಲೆಸಿದ್ದ. ‘ನಾನು ಹಾಗೂ ಭಾಸ್ಕರ್ ಮೊದಲು ಪ್ರೀತಿಸುತ್ತಿದ್ದೆವು. ಆ ಸಂದರ್ಭದಲ್ಲಿ ಒಟ್ಟಿಗೇ ಕೆಲವು ಫೋಟೊಗಳನ್ನೂ ತೆಗೆಸಿಕೊಂಡಿದ್ದೆವು. ಈ ನಡುವೆ ಆತನ ವರ್ತನೆಯಿಂದ ಬೇಸರವಾಗಿ ದೂರವಾಗಿದ್ದೆ. ಇಷ್ಟು ದಿನ ಸುಮ್ಮನಿದ್ದ ಆತ, ಈಗ ಹಳೇ ಫೊಟೊಗಳನ್ನು ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾನೆ’ ಎಂದು 27 ವರ್ಷದ ಯುವತಿ ಮೇ 1ರಂದು ಠಾಣೆಗೆ ದೂರು ಕೊಟ್ಟಿದ್ದರು.