ಮೃತರ ಪ್ಯಾಂಟ್ ಜೇಬಿನಲ್ಲಿ ಪತ್ರ ಸಿಕ್ಕಿದ್ದು, ‘ನನ್ನ ಸಾವಿಗೆ ಶ್ಯಾಮ್ ಕಾರಣ’ ಎಂದು ಬರೆಯಲಾಗಿದೆ. ಹೀಗಾಗಿ, ಆತ್ಮಹತ್ಯೆಗೆ ಪ್ರಚೋದನೆ (ಐಪಿಸಿ 306) ನೀಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಶ್ಯಾಮ್ ಹಾಗೂ ಬಸವನಗೌಡ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.