<p><strong>ಬೆಂಗಳೂರು: </strong>ಮದುವೆ ನಡೆಯಬೇಕಿದ್ದ ದಿನವೇ ಡಾಮಿನಿಕ್ ರೊಜಾರಿಯಾ (24) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ವಸಂತನಗರದ ನಿವಾಸಿ ಡಾಮಿನಿಕ್, ನಗರದ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಎಂಜಿನಿಯರ್. ತಮ್ಮ ಮನೆಯಲ್ಲೇ ಶನಿವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಹೈಗ್ರೌಂಡ್ಸ್ ಠಾಣೆ ಪೊಲೀಸರು ಹೇಳಿದರು.</p>.<p>ಸಾವಿನ ಬಗ್ಗೆ ದೂರು ನೀಡಿರುವ ಡಾಮಿನಿಕ್ ಅವರ ತಂದೆ ಡೇವಿಡ್, ‘ಮಗನ ಸಾವಿಗೆ ಆತ ಮದುವೆಯಾಗಬೇಕಿದ್ದ ಯುವತಿಯ ಕಿರುಕುಳವೇ ಕಾರಣ. ಆಕೆಯ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಆಗ್ರಹಿಸಿದ್ದಾರೆ.</p>.<p>‘ಮಗನಿಗೂ ಯುವತಿಗೂ ಹಲವು ವರ್ಷಗಳಿಂದ ಪರಿಚಯವಿತ್ತು. ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ ಯುವತಿ, ಠಾಣೆಗೂ ದೂರು ನೀಡಿದ್ದಳು. ಎರಡು ವರ್ಷ ಬಿಟ್ಟು ಮದುವೆಯಾಗುವುದಾಗಿ ಡಾಮಿನಿಕ್ ಹೇಳಿದ್ದ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಇತ್ತೀಚೆಗೆ ಪುನಃ ದೂರು ನೀಡಿದ್ದ ಯುವತಿ, ಮದುವೆಯಾಗುವಂತೆ ಪಟ್ಟು ಹಿಡಿದಿದ್ದಳು. ಹೀಗಾಗಿ, ಮಗನಿಗೂ ಆಕೆಗೂ ಶನಿವಾರ ಮಧ್ಯಾಹ್ನ 3 ಗಂಟೆಗೆ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಮಾಡಲು ತೀರ್ಮಾನಿಸಿದ್ದೆವು. ಅದಕ್ಕೆ ಒಪ್ಪಿ ಮನೆಗೆ ಬಂದಿದ್ದ ಮಗ, ನಾನು ಹಾಗೂ ಪತ್ನಿ ಕೆಲಸಕ್ಕೆ ಹೋದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮದುವೆ ನಡೆಯಬೇಕಿದ್ದ ದಿನವೇ ಡಾಮಿನಿಕ್ ರೊಜಾರಿಯಾ (24) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ವಸಂತನಗರದ ನಿವಾಸಿ ಡಾಮಿನಿಕ್, ನಗರದ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಎಂಜಿನಿಯರ್. ತಮ್ಮ ಮನೆಯಲ್ಲೇ ಶನಿವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಹೈಗ್ರೌಂಡ್ಸ್ ಠಾಣೆ ಪೊಲೀಸರು ಹೇಳಿದರು.</p>.<p>ಸಾವಿನ ಬಗ್ಗೆ ದೂರು ನೀಡಿರುವ ಡಾಮಿನಿಕ್ ಅವರ ತಂದೆ ಡೇವಿಡ್, ‘ಮಗನ ಸಾವಿಗೆ ಆತ ಮದುವೆಯಾಗಬೇಕಿದ್ದ ಯುವತಿಯ ಕಿರುಕುಳವೇ ಕಾರಣ. ಆಕೆಯ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಆಗ್ರಹಿಸಿದ್ದಾರೆ.</p>.<p>‘ಮಗನಿಗೂ ಯುವತಿಗೂ ಹಲವು ವರ್ಷಗಳಿಂದ ಪರಿಚಯವಿತ್ತು. ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ ಯುವತಿ, ಠಾಣೆಗೂ ದೂರು ನೀಡಿದ್ದಳು. ಎರಡು ವರ್ಷ ಬಿಟ್ಟು ಮದುವೆಯಾಗುವುದಾಗಿ ಡಾಮಿನಿಕ್ ಹೇಳಿದ್ದ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಇತ್ತೀಚೆಗೆ ಪುನಃ ದೂರು ನೀಡಿದ್ದ ಯುವತಿ, ಮದುವೆಯಾಗುವಂತೆ ಪಟ್ಟು ಹಿಡಿದಿದ್ದಳು. ಹೀಗಾಗಿ, ಮಗನಿಗೂ ಆಕೆಗೂ ಶನಿವಾರ ಮಧ್ಯಾಹ್ನ 3 ಗಂಟೆಗೆ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಮಾಡಲು ತೀರ್ಮಾನಿಸಿದ್ದೆವು. ಅದಕ್ಕೆ ಒಪ್ಪಿ ಮನೆಗೆ ಬಂದಿದ್ದ ಮಗ, ನಾನು ಹಾಗೂ ಪತ್ನಿ ಕೆಲಸಕ್ಕೆ ಹೋದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>