ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಗುಲ ತೆರೆಯಲು ಚಿಂತನೆ: ಸಚಿವ ಕೋಟ

Last Updated 9 ಮೇ 2020, 15:23 IST
ಅಕ್ಷರ ಗಾತ್ರ

ಕುಂದಾಪುರ: ದೇಗುಲಗಳನ್ನು ಭಕ್ತರಿಗಾಗಿ ತೆರೆಯುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ದೇಗುಲ ತೆರೆದರೆ ಜನದಟ್ಟಣೆ ಸಮಸ್ಯೆ ತಲೆದೋರುವ ಸಾಧ್ಯತೆ ಇರುವುದರಿಂದ ಸಾಧಕಬಾಧಕಗಳ ಬಗ್ಗೆ ಅಧಿಕಾರಿಗಳ ಜತೆ ಹೆಚ್ಚಿನ ಚರ್ಚೆ ನಡೆಯುತ್ತಿದೆ’ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಕೊಲ್ಲೂರಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರು ಹಾಗೂ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಿಸಿ ಅವರು ಮಾತನಾಡಿದರು. ಭಕ್ತರಿಗೆ ದರ್ಶನದ ಅವಕಾಶ ಇಲ್ಲದೆ ಇದ್ದರೂ, ದೇವಸ್ಥಾನಗಳಲ್ಲಿ ನಡೆಯುವ ಪೂಜಾ ಕಾರ್ಯಗಳಿಗೆ ಯಾವುದೇ ಅಡಚಣೆ ಉಂಟಾಗಿಲ್ಲ. ಅರ್ಚಕರಿಗೆ ಆದಾಯ ಇಲ್ಲದೆ ಇರುವುದರಿಂದ 34 ಸಾವಿರಕ್ಕೂ ಅಧಿಕ ಅರ್ಚಕರಿಗೆ ಕಿಟ್ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅರ್ಚಕರಿಗೆ ಆರ್ಥಿಕ ನೆರವು ನೀಡುವ ಬಗ್ಗೆಯೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಗಮನಕ್ಕೆ ತರಲಾಗಿದೆ. ಉದ್ದೇಶಿತ ಉಚಿತ ಸಾಮೂಹಿಕ ವಿವಾಹದ ಕುರಿತು ಧಾರ್ಮಿಕ ಪರಿಷತ್ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT