‘ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಪಾದಚಾರಿ ಮಾರ್ಗ ನಿರ್ಮಾಣವಾಗಿವೆ. ಆದರೆ, ಬಳಕೆ ಮಾಡಿಕೊಳ್ಳಲು ಸಾರ್ವಜನಿಕರಿಗೆ ಆಗುತ್ತಿಲ್ಲ. ಕೆಲವರು ಕಸ ಸುರಿದರೆ, ಹಲವರು ಕಟ್ಟಡ ನಿರ್ಮಾಣ ಸಾಮಾಗ್ರಿಗಳಾದ ಮರಳು, ಕಲ್ಲು, ಜಲ್ಲಿ ಸುರಿಯುತ್ತಾರೆ. ಇನ್ನೂ ಕೆಲವರು ದ್ವಿಚಕ್ರ ವಾಹನಗಳನ್ನು ಅಡ್ಡಲಾಗಿ ನಿಲ್ಲಿಸುತ್ತಾರೆ. ಹೀಗಾದರೆ ಸಾರ್ವಜನಿಕರು ಎಲ್ಲಿ ಓಡಾಡಬೇಕು? ಸಂಚಾರಕ್ಕೆ ತೊಂದರೆ ಉಂಟು ಮಾಡುವವರಿಗೆ ಬಿಬಿಎಂಪಿ ದಂಡ ವಿಧಿಸಬೇಕು’ ಎಂಬುದು ಪಾದಚಾರಿಗಳ ಒತ್ತಾಯ.