2010ರಲ್ಲಿ ತನ್ನನ್ನು ಬಂಧಿಸಲು ಬಂದಿದ್ದ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿದ್ದ. ಆಗ ಆಡುಗೋಡಿ ಇನ್ಸ್ಪೆಕ್ಟರ್ ಕೈಗೆ ಗುಂಡು ಹೊಡೆದು ರಮೇಶ್ನನ್ನು ಬಂಧಿಸಿದ್ದರು. ಆರು ತಿಂಗಳ ಜೈಲುವಾಸದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ, ಕಾರು ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದ. 2014ರಲ್ಲಿ ಮೊದಲ ಪತ್ನಿಯನ್ನು ತೊರೆದು ಎರಡನೇ ಮದುವೆಯಾದ ರಮೇಶ್, ಆ ನಂತರ ಮತ್ತೆ ಹಳೆ ಚಾಳಿ ಮುಂದುವರಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.