ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇಜಸ್ವಿನಿಗೆ ತಪ್ಪಿದ ಟಿಕೆಟ್‌: ಉಸ್ತುವಾರಿಗೆ ಪ್ರತಿಭಟನೆ ಬಿಸಿ

Last Updated 28 ಮಾರ್ಚ್ 2019, 19:52 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿಯ ರಾಜ್ಯ ಉಸ್ತುವಾರಿ ಮುರಳೀಧರ ರಾವ್‌ ಅವರು ತೇಜಸ್ವಿನಿ ಅನಂತಕುಮಾರ್ ಅವರ ಮನೆಗೆ ಗುರುವಾರ ಭೇಟಿ ನೀಡಿ ಮನವೊಲಿಸಲು ಯತ್ನಿಸಿದರು. ಈ ವೇಳೆ, ಕೇಂದ್ರ ನಾಯಕರ ಧೋರಣೆ ಖಂಡಿಸಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹಿಂದಿನ‌ ಕಹಿ ಘಟನೆ ಮರೆತು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವಂತೆ ಮುರಳೀಧರ ರಾವ್‌ ಮನವಿ ಮಾಡಿದರು.

ಈ ವೇಳೆ, ತೇಜಸ್ವಿನಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಟಿಕೆಟ್‌ ತಪ್ಪಿಸಿದ್ದು ಏಕೆ ಎಂದು ಮೊದಲು ಸ್ಪಷ್ಟಪಡಿಸಿ ಎಂದು ಖಾರವಾಗಿ ನುಡಿದರು.ಮಾತುಕತೆ ಮುಗಿಸಿ ಮುರಳೀಧರ ರಾವ್‌ ಹೊರಬಂದಾಗ ಕಾರ್ಯಕರ್ತರು ಅಡ್ಡಗಟ್ಟಿ ಘೋಷಣೆ ಕೂಗಿದರು. ಕಾರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಅನಂತಕುಮಾರ್ ಸಹೋದರ ನಂದಕುಮಾರ್‌ ಕಾರ್ಯಕರ್ತರನ್ನು ಸಮಾಧಾನಪಡಿಸಿ ಮುರಳೀಧರ ರಾವ್‌ ಅವರು ತೆರಳಲು ಅನುವು ಮಾಡಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT