ಕೆ.ಆರ್ ಪುರ: ‘ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯಕ್ಕಾಗಿ ಟಿಪ್ಪುಸುಲ್ತಾನ್ ನೀಡಿದ ಕೊಡುಗೆ ಅಪಾರ. ಅವರನ್ನು ಯಾವುದೋ ಒಂದು ಜಾತಿ, ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕೆ ಜಯಂತಿಯನ್ನು ವಿರೋಧಿಸುವುದು ಸರಿಯಲ್ಲ’ ಎಂದು ಶಾಸಕ ಭೈರತಿ ಬಸವರಾಜ ಹೇಳಿದರು.
ಬೆಂಗಳೂರು ಪೂರ್ವ ತಾಲ್ಲೂಕು ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಬಿಜೆಪಿಯವರು ರಾಜಕೀಯ ಕಾರಣಗಳಿಗಾಗಿ ಟಿಪ್ಪುಸುಲ್ತಾನ್ ಜಯಂತಿ ವಿರೋಧಿಸುವುದು ಸರಿಯಲ್ಲ’ ಎಂದು ಅವರು ಹೇಳಿದರು.