ಕೆಡಿಪಿ ಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೈರಾಗಿದ್ದಕ್ಕೆ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಉಪಾಧ್ಯಕ್ಷ ಎನ್.ಬಿ.ಮಂಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಂ.ಶಂಕರ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಧಿಕಾರಿಗಳು ಕೆಡಿಪಿ ಸಭೆಗೆ ಬಂದು ಸೂಕ್ತ ಮಾಹಿತಿ ನೀಡದಿದ್ದರೆ, ನಮ್ಮ ಸದಸ್ಯರಿಗೆ ಏನೆಂದು ಉತ್ತರಿಸಬೇಕು ಎಂದು ಉಪಾಧ್ಯಕ್ಷ ಮಂಜು ಅಧಿಕಾರಿ ವರ್ಗದ ವಿರುದ್ಧ ಗರಂ ಆದರು.