ಮೆಜೆಸ್ಟಿಕ್ಗೆ ಬೆಳಿಗ್ಗೆ ಬಂದಿದ್ದ ರೈತರು, ಅಲ್ಲಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ನಡೆದುಕೊಂಡೇ ಹೋದರು. ಅದೇ ವೇಳೆ ಶೇಷಾದ್ರಿ ಮೇಲ್ಸೇತುವೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಯಿತು. ಮೆರವಣಿಗೆ ಹಿಂದೆಯೇ ಬರುತ್ತಿದ್ದ ವಾಹನಗಳು, ದಟ್ಟಣೆಯಲ್ಲಿ ಸಿಲುಕಿ ಸಾಲುಗಟ್ಟಿ ನಿಲ್ಲಬೇಕಾಯಿತು. ಶೇಷಾದ್ರಿಪುರ ಮೇಲ್ಸೇತುವೆ, ಮೆಜೆಸ್ಟಿಕ್, ಗಾಂಧಿನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ದಟ್ಟಣೆ ಕಂಡುಬಂತು.