ಉಡಾನ್ ಮತ್ತಿತರ ಕಂಪನಿಗಳಿಗೆ ಲೈಸೆನ್ಸ್ ನೀಡಿರುವುದರಿಂದ ಕಾನೂನುಬದ್ಧವಾಗಿ ವ್ಯಾಪಾರ ಮಾಡುತ್ತಿರುವ ಎಪಿಎಂಸಿ ವರ್ತಕರಿಗೆ ಅನ್ಯಾಯ ಆಗಲಿದೆ. ಅಲ್ಲದೆ, ಈ ಕಂಪನಿಗೆ ಟ್ರೇಡ್ ಲೈಸೆನ್ಸ್ ಅಥವಾ ಜಿಎಸ್ಟಿ ನೋಂದಣಿ ಇರುವುದಿಲ್ಲ. ಇದರಿಂದ ರಾಜ್ಯ ಹಾಗೂ ಕೇಂದ್ರದ ಬೊಕ್ಕಸಕ್ಕೆ ಯಾವುದೇ ಆದಾಯ ಬರುವುದಿಲ್ಲ ಎಂದು ವರ್ತಕರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.