ಸರ್ಕಾರ ಜಾರಿಗೆ ತರಲು ಹೊರಟಿರುವ ನೂತನ ನೀತಿಯಿಂದ ದಲಿತರು ಹಾಗೂ ಹಿಂದುಳಿದ ವರ್ಗದವರು ಮತ್ತಷ್ಟು ಅವಕಾಶ ವಂಚಿತರಾಗಲಿದ್ದಾರೆ. ಬೇರೊಂದು ವರ್ಗದ ಜನತೆಯನ್ನು ಓಲೈಸಲು ಮುಂದಾಗಿರುವ ಸರ್ಕಾರ ಸಂವಿಧಾನ ವಿರೋಧಿ ಕೃತ್ಯಕ್ಕೆ ಕೈಹಾಕಿದೆ. ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮುದಾಯದ ಅಭ್ಯುದಯಕ್ಕಾಗಿಯೇ ಮೀಸಲಾತಿ ಜಾರಿಗೆ ತರಲಾಗಿದೆ ಎಂಬ ಕನಿಷ್ಠ ಸತ್ಯವನ್ನು ಸರ್ಕಾರ ಮರೆತಿರುವುದು ದೌರ್ಭಾಗ್ಯ ಎಂದು ವಿದ್ಯಾರ್ಥಿಗಳು ಕಿಡಿಕಾರಿದರು.