ಈ ಬಗ್ಗೆ ಸ್ಪಷ್ಟನೆ ನೀಡಿರುವ ಶ್ರೀನಿವಾಸ ಪೂಜಾರಿ, ‘ಅಧಿವೇಶನ ನಡೆಯದ ವೇಳೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಮೀಸಲಾಗಿರುವ ಕೊಠಡಿಯನ್ನಷ್ಟೇ ಕಚೇರಿಯಾಗಿ ಬಳಸುತ್ತೇನೆ. ಪರಿಷತ್ತಿನ ಅಧಿವೇಶನ ನಡೆಯುವ ಹೊತ್ತಿನಲ್ಲಿ ಕಾರ್ಯಕಲಾಪಗಳಿಗೆ ಹಾಗೂ ಸಂದರ್ಶಕರ ಭೇಟಿಗೆ ಅನುಕೂಲವಾಗುವಂತೆ ವಿಧಾನಸಭಾಧ್ಯಕ್ಷರ ಕಚೇರಿಗೆ ಹೊಂದಿಕೊಂಡಂತೆ ಇರುವ ‘ಸಂದರ್ಶಕರ ಕೊಠಡಿ’ಯನ್ನು ನೀಡಲಾಗಿರುತ್ತದೆ. ಆ ಅವಧಿಯಲ್ಲಿ ಮಾತ್ರ ಅದನ್ನು ಬಳಸಲಾಗುತ್ತದೆ. ಅಧಿವೇಶನ ಮುಗಿದ ಬಳಿಕ ಅದನ್ನು ಸಚಿವಾಲಯದ ಸುಪರ್ದಿಗೆ ನೀಡಲಾಗುತ್ತದೆ. ಅದರ ಬಾಗಿಲಿನ ಕೀ ಕೂಡ ಸಚಿವಾಲಯದ ಸಿಬ್ಬಂದಿ ಬಳಿಯೇ ಇರುತ್ತದೆ’ ಎಂದು ತಿಳಿಸಿದ್ದಾರೆ.