ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಶನಿವಾರ ಅತ್ತಿಬೆಲೆ ಬಳಿ ಹೊಸೂರು ರಸ್ತೆ ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುತ್ತದೆ.
ಅಂದು, ತಮಿಳುನಾಡಿಗೆ ಹೋಗುವ ಹಾಗೂ ಆ ಕಡೆಯಿಂದ ಬರುವ ವಾಹನಗಳನ್ನು ತಡೆಯಲಾಗುತ್ತದೆಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.
‘ತಮಿಳುನಾಡಿಗೆ ಮೇಕೆದಾಟು ಯೋಜನೆ ಕುರಿತು ಮಾತನಾಡಲು ಯಾವುದೇ ಅಧಿಕಾರವಿಲ್ಲ. ರಾಜ್ಯ ಸರ್ಕಾರ ಕೂಡಲೇ ಯೋಜನೆಯನ್ನು ಆರಂಭಿಸಬೇಕು’ ಎಂದು ಆಗ್ರಹಿಸಿದರು.