ವಿಚಾರಣೆ ವೇಳೆ ಕಾನೂನು ಸೇವಾ ಪ್ರಾಧಿಕಾರದ ಪರ ಹಾಜರಾಗಿದ್ದ ವಕೀಲ ವೆಂಕಟೇಶ್ ಪಿ.ದಳವಾಯಿ, 2018ರಲ್ಲಿ ಇಮ್ತಿಯಾಜ್ ರಮ್ಜಾನ್ ಖಾನ್ ವರ್ಸಸ್ ಮಹಾರಾಷ್ಟ್ರ ರಾಜ್ಯದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಪಾಲಿಸುವಂತೆ ನಿರ್ದೇಶಿಸಬೇಕು ಎಂದು ಕೋರಿದ್ದರು.