‘ಆರೋಪಿಗಳ ಮಾತು ನಂಬಿದ್ದ ಭಾಸ್ಕರ್, ಹಣ ಕೊಟ್ಟಿದ್ದರು. ಆದರೆ, ಆರೋಪಿಗಳು ಇದುವರೆಗೂ ಯಾವುದೇ ಟೆಂಡರ್ ಕೊಡಿಸಿಲ್ಲ. ಹಣವನ್ನೂ ವಾಪಸ್ ಕೊಟ್ಟಿಲ್ಲ. ಆ ಬಗ್ಗೆ ದೂರುದಾರರು ವಿಚಾರಿಸಿದರೆ, ಆರೋಪಿಗಳು ಜೀವ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಭಾಸ್ಕರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ವಿವರಿಸಿದರು.