ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಡಿ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡಿನ ವಿ.ಕೆ.ಶಶಿಕಲಾ ಕನ್ನಡ ಕಲಿಯಲು ಸರ್ಟಿಫಿಕೇಟ್ ಕೋರ್ಸ್ಗೆ ಪ್ರವೇಶ ಪಡೆದಿದ್ದಾರೆ.
ಶಶಿಕಲಾ ಹಾಗೂ ಜೈಲಿನಲ್ಲಿರುವ ಅವರ ಸ್ನೇಹಿತೆ ಇಳವರಸಿ ಭಾಷೆ ಕಲಿಕೆಗಾಗಿ ಬೆಂಗಳೂರು ವಿಶ್ವವಿದ್ಯಾಲಯದ ದೂರಶಿಕ್ಷಣ ನಿರ್ದೇಶನಾಲಯದಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ.
‘ಜೈಲಿನಲ್ಲಿನ ಇತರ 257 ಕೈದಿಗಳು ಸಹ, ಆಸಕ್ತಿ ಇರುವ ಕೋರ್ಸ್ಗಳಿಗೆ ದಾಖಲಾಗುತ್ತಿದ್ದಾರೆ. ವಿಶ್ವವಿದ್ಯಾಲಯದ ಸಿಬ್ಬಂದಿ ಜೈಲಿಗೆ ಸೋಮವಾರ ಹೋಗಿ ಪ್ರವೇಶ ಪ್ರಕ್ರಿಯೆ ನಡೆಸುವರು’ ಎಂದು ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಬಿ.ಸಿ.ಮೈಲಾರಪ್ಪ ತಿಳಿಸಿದರು.