ನೊಣವಿನಕೆರೆಯಲ್ಲಿ ಆದಿ ಚುಂಚನಗಿರಿ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮ ಇತ್ತು. ಅಶ್ವತ್ಥನಾರಾಯಣ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿಯ ನಂಜಾವಧೂತ ಸ್ವಾಮೀಜಿ ಪೂಜಾ ಕಾರ್ಯ ಮುಗಿಸಿ ಉದ್ಘಾಟನೆಗೆ ಜೊತೆಯಲ್ಲಿ ಬರುತ್ತಿದ್ದರು.