ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸ ಬಿಸಾಡುವಲ್ಲಿ ರಂಗೋಲಿ

Last Updated 6 ಅಕ್ಟೋಬರ್ 2019, 18:27 IST
ಅಕ್ಷರ ಗಾತ್ರ

ವೈಟ್‌ಫೀಲ್ಡ್: ರಸ್ತೆ, ಸಾರ್ವಜನಿಕ ಪ್ರದೇಶದಲ್ಲಿ ಕಸ ಬಿಸಾಡುವ ಜಾಗಗಳಲ್ಲಿ ಬಿಬಿಎಂಪಿಯ ಮಹದೇವಪುರ ವಲಯದ ಅಧಿಕಾರಿಗಳು ಸಸಿ ನೆಟ್ಟು, ರಂಗೋಲಿ ಬಿಡಿಸಿ ಸುಂದರ ತಾಣವಾಗಿ ಮಾರ್ಪಡಿಸಲು ಮುಂದಾಗಿದ್ದಾರೆ.

ಕ್ಷೇತ್ರದ ದೊಡ್ಡನಕ್ಕುಂದಿ ವಾರ್ಡ್‌ನ ಇಸ್ರೊ ಬಳಿ ದುರ್ನಾತ ಬೀರುತ್ತಿದ್ದ ಬ್ಲಾಕ್ ಸ್ಪಾಟ್‌ನಲ್ಲಿ ಗಿಡ ನೆಡಲು ಚಾಲನೆ ನೀಡಿದ ಮಹದೇವಪುರ ವಲಯ ಜಂಟಿ ಆಯುಕ್ತ ವೆಂಕಟಾಚಲಪತಿ, ರಸ್ತೆ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ರಾತ್ರಿ ವೇಳೆ ಕಸ ಎಸೆಯುತ್ತಿದ್ದವರಿಗೆ ದಂಡ ವಿಧಿಸಲಾಗಿತ್ತು. ಆ ಜಾಗಗಳಲ್ಲಿ ರಂಗೋಲಿ ಹಾಕಿ ಗಿಡ ನೆಟ್ಟು ಸುಂದರ ತಾಣವನ್ನಾಗಿ ಮಾಡಲಾಗುವುದು’ ಎಂದರು.

ಮಹದೇವಪುರ ವಲಯದಲ್ಲಿ 12 ಬ್ಲಾಕ್ ಸ್ಥಳಗಳನ್ನು ಗುರುತಿಸಲಾಗಿದ್ದು ಗಿಡ ನೆಟ್ಟು ರಂಗೋಲಿ ಬಿಡಿಸಲಾಗುವುದು ಎಂದರು. ಪಾಲಿಕೆಯ ಸದಸ್ಯೆ ಶ್ವೇತಾ ವಿಜಯಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT