ಹೇರೋಹಳ್ಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದಶಿವಕುಮಾರ ಸ್ವಾಮೀಜಿ ಅವರ ಸಂಸ್ಮರಣೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ‘ಮಕ್ಕಳು ಹೆಚ್ಚು ಅಂಕ ಪಡೆಯುವಂತೆ ಮಾಡಿದರೆ ಮಾತ್ರ ಸಾಲದು. ಅವರಲ್ಲಿ ಉತ್ತಮ ಸಂಸ್ಕಾರ, ಪ್ರೀತಿ ವಾತ್ಸಲ್ಯ, ಉನ್ನತ ಮೌಲ್ಯಗಳನ್ನು ಬೆಳೆಸುವ ಕೆಲಸವನ್ನು ಪೋಷಕರು ಮಾಡಬೇಕು’ ಎಂದರು.