ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜವಾಹರಲಾಲ್ ನೆಹರೂ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ‘ದೇಶಕ್ಕಾಗಿ ಇಷ್ಟು ತ್ಯಾಗ ಮಾಡಿದ ಇನ್ನೊಂದು ಕುಟುಂಬ ಇಲ್ಲ. ಹೋರಾಡುವ ಅಗತ್ಯವೇ ಇಲ್ಲದ ಸಂದರ್ಭದಲ್ಲಿ ಹೋರಾಡಿದ ಅವರನ್ನು ಅಧಿಕಾರದಲ್ಲಿರುವ ಸರ್ಕಾರ ತೆಗಳುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅನುಯಾಯಿಗಳು ನೆಹರೂ ಅವರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನ ಮಾಡುತ್ತಿದ್ದಾರೆ’ ಎಂದರು.