ಕಸದ ಗಾಡಿಗಳು ಠಿಕಾಣಿ ಹೂಡಿರುವ ಸ್ಥಳದಿಂದ 30 ಮೀಟರ್ ದೂರದಲ್ಲಿ ಯಲಹಂಕ ವಲಯ ಬಿಬಿಎಂಪಿ ಕಚೇರಿಯೂ ಇದ್ದು, ಸಿಬ್ಬಂದಿ ಪ್ರತಿನಿತ್ಯ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದರೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಯ ಕಡೆ ಲಕ್ಷ್ಯ ವಹಿಸದಿರುವುದು ಅವರ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಎಂದು ಆರೋಪಿಸಿದ ಅವರು, ‘ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಿ, ಕಸದ ವಾಹನಗಳನ್ನು ಇಲ್ಲಿಂದ ಸ್ಥಳಾಂತರಿಸಬೇಕು’ ಎಂದು ಒತ್ತಾಯಿಸಿದರು.