ಮೂಲಸೌಕರ್ಯ ಕ್ಷಮತೆಗಿಂತ ನೂರಾರು ಪಟ್ಟು ವೇಗದಲ್ಲಿ ನಗರ ಬೆಳೆಯುತ್ತಿದೆ. ಮೂಲಸೌಕರ್ಯ ವಿಸ್ತರಿಸುವ ಅಗತ್ಯವಿದೆ. ಇದಕ್ಕಾಗಿ ಸರ್ಕಾರಿ ಭೂಮಿಯನ್ನು ಗುರುತಿಸಬೇಕು. ಅಲ್ಲದೆ, ನಗರ ಜಿಲ್ಲಾಧಿಕಾರಿ ಬಳಿ ಸರ್ಕಾರಿ ಭೂಮಿ ಲಭ್ಯವಿದ್ದು, ಅದನ್ನು ಬಳಸಿಕೊಳ್ಳಬೇಕು. ಈಗ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಭೂಮಿಯ ಬೆಲೆ ಗಗನಕ್ಕೇರುತ್ತದೆ ಮತ್ತು ಸರ್ಕಾರವು ಖಾಸಗಿಯವರ ಹತ್ತಿರ ಭೂಸ್ವಾಧೀನಪಡಿಸಿಕೊಳ್ಳುವುದು ಸಾಧ್ಯವಾಗುವುದಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ.