ವಿಲ್ಸನ್ ಗಾರ್ಡನ್ನ ವಿನಾಯಕ ನಗರದಲ್ಲಿರುವ ‘ರೈಟರ್ಸ್ ಸೇಫ್ ಗಾರ್ಡ್’ ಏಜೆನ್ಸಿಯ ನೌಕರರಾದ ದೇವೇಂದ್ರ ಹಾಗೂ ಮಂಜುನಾಥ್, ರಾತ್ರಿ 10 ಗಂಟೆ ಸುಮಾರಿಗೆ ಹಣ ತೆಗೆದುಕೊಂಡು ಕಚೇರಿಗೆ ತೆರಳುತ್ತಿದ್ದರು. ಈ ವೇಳೆ ಮೂರು ಬೈಕ್ಗಳಲ್ಲಿ ಹಿಂಬಾಲಿಸಿ ಬಂದು ಅವರನ್ನು ಅಡ್ಡಗಟ್ಟಿದ ಆರು ಮಂದಿ, ಹೆಲ್ಮೆಟ್ ಹಾಗೂ ರಾಡ್ನಿಂದ ಹಲ್ಲೆ ನಡೆಸಿ ಹಣ ಕಿತ್ತುಕೊಂಡು ಹೋಗಿದ್ದಾರೆ. ದೇವೇಂದ್ರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಆರು ಹೊಲಿಗೆಗಳನ್ನು ಹಾಕಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.