ಚಿಂಚೋಳಿ: ತಾಲ್ಲೂಕಿನ ಅಣವಾರ ಗ್ರಾಮದಲ್ಲಿ ಶನಿವಾರ ತಡರಾತ್ರಿ ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾನೆ. ಗ್ರಾಮದ ಶ್ರೀದೇವಿ ಮಲ್ಲಪ್ಪ ಪೂಜಾರಿ (36) ಕೊಲೆಯಾದ ದುರ್ದೈವಿ.
ಗ್ರಾಮದ ಹಳೆಮನೆಯಲ್ಲಿ ಕಲ್ಲುಗಳಿಂದ ಜಜ್ಜಿ, ಕಬ್ಬಿಣದ ಸಲಾಕೆಯಿಂದು ಇರಿದು ಕೊಲೆ ಮಾಡಲಾಗಿದೆ. ಆರೋಪಿ ಮಲ್ಲಪ್ಪ ಅಲಿಯಾಸ್ ಮಲ್ಲಿಕಾರ್ಜುನ ಪೂಜಾರಿ ತಲೆಮರೆಸಿಕೊಂಡಿದ್ದಾರೆ.
ಚಿಮ್ಮಾ ಈದಲಾಯಿ ಗ್ರಾಮದ ಶ್ರೀದೇವಿ, ಅಣವಾರದ ಮಲ್ಲಪ್ಪ ಪೂಜಾರಿ ಇಬ್ಬರೂ ಹತ್ತಿರದ ಸಂಬಂಧಿಗಳಾಗಿದ್ದು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆನಂತರ ಹೆಣ್ಣು ಮಕ್ಕಳಿಗೆ ಆಸ್ತಿ ಪಾಲು ಬೇಕೆಂದು ನ್ಯಾಯಾಲಯದ ಮೊರೆ ಹೋಗಿ ರಾಜಿ ಮಾಡಿಕೊಂಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಈಗ ಹಣಕ್ಕಾಗಿ ತನ್ನ ಮಗಳನ್ನು ಅಳಿಯ ಕೊಲೆ ಮಾಡಿದ್ದಾನೆ ಎಂದು ಶ್ರೀದೇವಿಯ ಪೋಷಕರು ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಡಿವೈಎಸ್ಪಿ ವೀರಭದ್ರಯ್ಯ, ಸರ್ಕಲ್ ಇನಸ್ಪೆಕ್ಟರ್ ಎಚ್.ಎಂ. ಇಂಗಳೇಶ್ವರ, ಸಬ್ ಇನಸ್ಪೆಕ್ಟರ್ ರಾಜಶೇಖರ ರಾಠೋಡ ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.