<p><strong>ನವದೆಹಲಿ</strong>: ದೇಶದಲ್ಲಿ ಕಂಡುಬಂದಿರುವ ಕೋವಿಡ್–19 ಸಕ್ರಿಯ ಪ್ರಕರಣಗಳ ಪೈಕಿ ಶೇ 90ರಷ್ಟು ಪ್ರಕರಣಗಳು 8 ರಾಜ್ಯಗಳಲ್ಲಿ ವರದಿಯಾಗಿವೆ ಎಂದು ಕೋವಿಡ್–19ಕ್ಕೆ ಸಂಬಂಧಿಸಿದ ಸಚಿವರ ಗುಂಪಿಗೆ ಗುರುವಾರ ಮಾಹಿತಿ ನೀಡಲಾಗಿದೆ.</p>.<p>ಒಟ್ಟು ಪ್ರಕರಣಗಳ ಪೈಕಿ ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಉತ್ತರ ಪ್ರದೇಶ ಹಾಗೂ ಗುಜರಾತ್ನಲ್ಲಿ ಶೇ 90ರಷ್ಟು ಸಕ್ರಿಯ ಪ್ರಕರಣಗಳು ವರದಿಯಾಗಿವೆ ಎಂದುಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ನೇತೃತ್ವದಲ್ಲಿ ನಡೆದ ಸಚಿವರ ಗುಂಪಿನ 18ನೇ ಸಭೆಗೆ ಮಾಹಿತಿ ನೀಡಲಾಗಿದೆ.</p>.<p>ಕೊರೊನಾ ಸೋಂಕಿನಿಂದಾದ ಸಾವುಗಳಲ್ಲಿ ಮಹಾರಾಷ್ಟ್ರ, ದೆಹಲಿ, ಗುಜರಾತ್, ತಮಿಳುನಾಡು, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಮರಣ ಪ್ರಮಾಣ ಶೇ 86 ಇದೆ. ಜಿಲ್ಲಾವಾರು ಪ್ರಮಾಣ ಪರಿಗಣಿಸಿದರೆ, 32 ಜಿಲ್ಲೆಗಳಲ್ಲಿನ ಸಾವಿನ ಪ್ರಮಾಣವೇ ಶೇ 80ರಷ್ಟಾಗಲಿದೆ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ನಿರ್ದೇಶಕ ಡಾ.ಸುರ್ಜೀತ್ ಸಿಂಗ್ ಅವರು ಸಭೆಗೆ ಮಾಹಿತಿ ನೀಡಿದರು.</p>.<p><strong>ಮುಖ್ಯಾಂಶಗಳು</strong></p>.<p>21.3 ಕೋಟಿ -ಎನ್95 ಮಾಸ್ಕ್ ವಿತರಣೆ</p>.<p>1.2 ಕೋಟಿ - ಪಿಪಿಇ ಕಿಟ್ ವಿತರಣೆ</p>.<p>6.12 ಕೋಟಿ -ಹೈಡ್ರಾಕ್ಸಿಕ್ಲೋರೊಕ್ವಿನ್ ಮಾತ್ರೆ ವಿತರಣೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ ಕಂಡುಬಂದಿರುವ ಕೋವಿಡ್–19 ಸಕ್ರಿಯ ಪ್ರಕರಣಗಳ ಪೈಕಿ ಶೇ 90ರಷ್ಟು ಪ್ರಕರಣಗಳು 8 ರಾಜ್ಯಗಳಲ್ಲಿ ವರದಿಯಾಗಿವೆ ಎಂದು ಕೋವಿಡ್–19ಕ್ಕೆ ಸಂಬಂಧಿಸಿದ ಸಚಿವರ ಗುಂಪಿಗೆ ಗುರುವಾರ ಮಾಹಿತಿ ನೀಡಲಾಗಿದೆ.</p>.<p>ಒಟ್ಟು ಪ್ರಕರಣಗಳ ಪೈಕಿ ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಉತ್ತರ ಪ್ರದೇಶ ಹಾಗೂ ಗುಜರಾತ್ನಲ್ಲಿ ಶೇ 90ರಷ್ಟು ಸಕ್ರಿಯ ಪ್ರಕರಣಗಳು ವರದಿಯಾಗಿವೆ ಎಂದುಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ನೇತೃತ್ವದಲ್ಲಿ ನಡೆದ ಸಚಿವರ ಗುಂಪಿನ 18ನೇ ಸಭೆಗೆ ಮಾಹಿತಿ ನೀಡಲಾಗಿದೆ.</p>.<p>ಕೊರೊನಾ ಸೋಂಕಿನಿಂದಾದ ಸಾವುಗಳಲ್ಲಿ ಮಹಾರಾಷ್ಟ್ರ, ದೆಹಲಿ, ಗುಜರಾತ್, ತಮಿಳುನಾಡು, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಮರಣ ಪ್ರಮಾಣ ಶೇ 86 ಇದೆ. ಜಿಲ್ಲಾವಾರು ಪ್ರಮಾಣ ಪರಿಗಣಿಸಿದರೆ, 32 ಜಿಲ್ಲೆಗಳಲ್ಲಿನ ಸಾವಿನ ಪ್ರಮಾಣವೇ ಶೇ 80ರಷ್ಟಾಗಲಿದೆ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ನಿರ್ದೇಶಕ ಡಾ.ಸುರ್ಜೀತ್ ಸಿಂಗ್ ಅವರು ಸಭೆಗೆ ಮಾಹಿತಿ ನೀಡಿದರು.</p>.<p><strong>ಮುಖ್ಯಾಂಶಗಳು</strong></p>.<p>21.3 ಕೋಟಿ -ಎನ್95 ಮಾಸ್ಕ್ ವಿತರಣೆ</p>.<p>1.2 ಕೋಟಿ - ಪಿಪಿಇ ಕಿಟ್ ವಿತರಣೆ</p>.<p>6.12 ಕೋಟಿ -ಹೈಡ್ರಾಕ್ಸಿಕ್ಲೋರೊಕ್ವಿನ್ ಮಾತ್ರೆ ವಿತರಣೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>