ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುದುಚೇರಿ | ಲೆಪ್ಟಿನೆಂಟ್‌ ಗವರ್ನರ್‌ ವಜಾ ಮಾಡಿ: ಕೇಂದ್ರಕ್ಕೆ ಎಐಎಡಿಎಂಕೆ ಆಗ್ರಹ

Last Updated 22 ಜುಲೈ 2020, 8:00 IST
ಅಕ್ಷರ ಗಾತ್ರ

ಪುದುಚೇರಿ: ಎಐಎಡಿಎಂಕೆ ಶಾಸಕರು ಲೆಪ್ಟಿನೆಂಟ್‌ ಗವರ್ನರ್‌ ಅವರನ್ನು ವಜಾಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವಿಧಾನಸಭೆಯಿಂದ ಬುಧವಾರ ಹೊರ ನಡೆದರು.

ಪುದುಚೇರಿಯಲ್ಲಿ ಮಳೆಗಾಲದ ಅಧಿವೇಶನ ಆರಂಭವಾಗಿದ್ದು ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರು ಸದನದಲ್ಲಿ ವಿವಿಧ ಅಭಿವೃದ್ಧಿಗಳನ್ನು ಘೋಷಣೆ ಮಾಡಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಈ ನಡುವೆ ಸರ್ಕಾರ ಮತ್ತು ಲೆಪ್ಟಿನೆಂಟ್‌ ಗವರ್ನರ್‌ ಕಿರಣ್ ಬೇಡಿ ಅವರ ನಡುವಿನ ಸಂಘರ್ಷ ದೇಶದ ಗಮನ ಸೆಳೆದಿದೆ.

ಈ ಹಿನ್ನೆಲೆಯಲ್ಲಿ ಎಐಎಡಿಎಂಕೆ ಶಾಸಕರು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರವನ್ನು ಮತ್ತಷ್ಟು ಸದೃಢಗೊಳಿಸಬೇಕು ಹಾಗೂ ಲೆಪ್ಟಿನೆಂಟ್‌ ಗವರ್ನರ್‌ ಅವರನ್ನು ವಜಾಗೊಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಸದನದಿಂದ ಹೊರ ನಡೆದರು.

ಕೆಲ ಹೊತ್ತು ಸದನದ ಹೊರಗೆ ಫಲಕಗಳನ್ನು ಲೆಪ್ಟಿನೆಂಟ್‌ ಗವರ್ನರ್‌ ಅವರನ್ನು ವಜಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT