ಆಗ ವಿಧಾನಸಭಾ ಚುನಾವಣೆಗೆ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾನ್ ಸಿಂಗ್ ಅವರು ರಾಜಸ್ಥಾನದ ಆಗಿನ ಮುಖ್ಯಮಂತ್ರಿ ಶಿವ ಚರಣ್ ಮಾಥುರ್ ಅವರ ಹೆಲಿಕಾಪ್ಟರ್ಗೆ ಹಾನಿ ಉಂಟು ಮಾಡಿದ್ದರು.ಮಾಥುರ್ ಅವರು ಭರತಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬ್ರಜೇಂದ್ರ ಸಿಂಗ್ ಪರ ಚುನಾವಣಾ ಪ್ರಚಾರ ರ್ಯಾಲಿ ನಡೆಸಲು ನಿರ್ಧರಿಸಿದ್ದರು. ಅದಕ್ಕಾಗಿ ನಿರ್ಮಿಸಿದ್ದ ವೇದಿಕೆಗೂ ಮಾನ್ ಸಿಂಗ್ ಹಾಗೂ ಅವರ ಬೆಂಬಲಿಗರು ಹಾನಿಮಾಡಿದ್ದರು ಎಂದು ಆರೋಪಿಸಲಾಗಿತ್ತು.