ಶ್ರೀನಗರ:ಈ ವರ್ಷ ಅಮರನಾಥ ‘ಆರತಿ’ ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದ್ದು, ಪ್ರತಿದಿನ 500 ಯಾತ್ರಾರ್ಥಿಗಳಿಗೆ ಮಾತ್ರವೇ ದರ್ಶನಕ್ಕೆ ಅವಕಾಶ ನೀಡಲು ಜಮ್ಮು, ಕಾಶ್ಮೀರ ಸರ್ಕಾರ ನಿರ್ಧರಿಸಿದೆ.
ಕೊರೊನಾ ಸೋಂಕು ಪ್ರಕರಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಯಾತ್ರೆಯುಈ ತಿಂಗಳ 23ರಿಂದ ಆರಂಭವಾಗಲಿದೆ.
ಅಮರನಾಥ ಯಾತ್ರೆಸಂಬಂಧ, ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಬಿವಿಆರ್ ಸುಬ್ರಹ್ಮಣ್ಯ ಅವರ ಅಧ್ಯಕ್ಷತೆಯಲ್ಲಿಸುಪ್ರೀಂ ಕೋರ್ಟ್ ರಚಿಸಿದ್ದ ಉಪಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ವಿಪತ್ತು ನಿರ್ವಹಣಾ ಕಾಯ್ದೆಯಡಿ ರಚಿಸಲಾದ ರಾಜ್ಯ ಕಾರ್ಯಕಾರಿ ಸಮಿತಿಯು ಕೋವಿಡ್–19ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಿದೆ.ಜಮ್ಮು, ಕಾಶ್ಮಿರಕ್ಕೆ ಪ್ರಯಾಣಿಸುವ ಎಲ್ಲರನ್ನೂ ಆರ್ಟಿ–ಪಿಡಿಆರ್ ತಪಾಸಣೆಗೆ ಒಳಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.