ನವದೆಹಲಿ: ಉತ್ತರ ಪ್ರದೇಶದಲ್ಲಿ ಪೊಲೀಸರಿಗೆ ಸುರಕ್ಷತೆ ಇಲ್ಲ ಎಂಬುದಾದರೆ ಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಕಾನ್ಪುರದಲ್ಲಿ 8 ಪೊಲೀಸರು ಮೃತಪಟ್ಟ ಘಟನೆಯನ್ನು ಅವರು ಖಂಡಿಸಿದ್ದಾರೆ.
‘ಈ ಕೃತ್ಯ ಉತ್ತರಪ್ರದೇಶ ಗೂಂಡಾರಾಜ್ಯ ಎಂಬುದಕ್ಕೆ ಇನ್ನೊಂದು ನಿದರ್ಶನ. ಇಲ್ಲಿ ಪೊಲೀಸರಿಗೂ ರಕ್ಷಣೆ ಇಲ್ಲ’ ಎಂದು ಅವರು ಟೀಕಿಸಿದ್ದಾರೆ.
ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿರುವ ಅವರು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದಿದ್ದಾರೆ.