‘ಪೂರ್ವ ಲಡಾಕ್ನಲ್ಲಿ ವಾಸ್ತವ ನಿಯಂತ್ರಣ ರೇಖೆಯ ಉದ್ದಕ್ಕೂ ನಿಯೋಜಿಸಲಾಗಿರುವ ಸೇನೆಯನ್ನು ಹಿಂಪಡೆಯುವ ಕಾರ್ಯ ಪ್ರಗತಿಯಲ್ಲಿದೆ. ಅದರೆ, ಇನ್ನೂ ಪೂರ್ಣಗೊಂಡಿಲ್ಲ. ಚೀನಾ ಕಡೆಯವರು ಸೇನೆಯನ್ನು ಹಿಂಪಡೆಯಲಿದ್ದಾರೆ, ಬಿಕಟ್ಟು ನಿವಾರಿಸಲು ಪ್ರಾಮಾಣಿಕವಾಗಿ ಶ್ರಮಿಸಲಿದ್ದಾರೆ ಹಾಗೂ ಗಡಿಯಲ್ಲಿ ಶಾಂತಿ, ನೆಮ್ಮದಿ ಪುನಃ ಸ್ಥಾಪನೆಯಾಗಲಿದೆ ಎಂದು ನಿರೀಕ್ಷಿಸಿದ್ದೇವೆ’ ಎಂದು ಭಾರತ ಗುರುವಾರ ಹೇಳಿಕೆ ನೀಡಿತ್ತು.
ಭಾರತ ಹಾಗೂ ಚೀನಾದ ಸೇನೆಗಳು ಮೇ ತಿಂಗಳಿನಿಂದ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಬೀಡುಬಿಟ್ಟಿವೆ. ಜೂನ್ 15 ರಂದು ಗಾಲ್ವನ್ ಕಣಿವೆಯಲ್ಲಿ ನಡೆದ ಸಂಘರ್ಷದ ಬಳಿಕ ಗಡಿಯುದ್ದಕ್ಕೂ ಉದ್ವಿಗ್ನತೆ ಉಲ್ಬಣಗೊಂಡಿದೆ.