<p><strong>ಜೈಪುರ:</strong>ವಿಧಾನಸಭೆ ಅಧಿವೇಶನ ನಡೆಸಲು ರಾಜ್ಯಪಾಲ ಕಲ್ರಾಜ್ ಮಿಶ್ರಾ ಅನುಮತಿ ನೀಡಿರುವ ಬೆನ್ನಲ್ಲೇ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಚುರುಕುಗೊಂಡಿವೆ.</p>.<p>ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿಷ್ಠ ಶಾಸಕರನ್ನು ಜೈಪುರ ಹೋಟೆಲ್ನಿಂದ ಜೈಸಲ್ಮೇರ್ನಲ್ಲಿರುವ ಹೋಟೆಲ್ಗೆ ಶುಕ್ರವಾರ ಸ್ಥಳಾಂತರಿಸಲು ಮುಖಂಡರು ಮುಂದಾಗಿದ್ದಾರೆ. ಆದರೆ, ಶಾಸಕರನ್ನು ಸ್ಥಳಾಂತರಿಲು ಕಾರಣ ಏನು ಎಂಬುದನ್ನು ಮೂಲಗಳು ಸ್ಪಷ್ಟಪಡಿಸಿಲ್ಲ.</p>.<p>ಶಾಸಕರನ್ನು ಸದ್ಯ ಜೈಪುರ–ದೆಹಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಐಷಾರಾಮಿ ಹೋಟೆಲ್ನಲ್ಲಿ ಇರಿಸಲಾಗಿದೆ. ಅಲ್ಲಿಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಗೆಹ್ಲೋಟ್ ಅವರು ಶಾಸಕರನ್ನು ಉದ್ದೇಶಿಸಿ ಮಾತನಾಡುವರು. ನಂತರ ಎಲ್ಲರನ್ನು ಜೈಸಲ್ಮೇರ್ನ ಹೋಟೆಲ್ಗೆ ಸ್ಥಳಾಂತರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.</p>.<p>ಸಚಿನ್ ಪೈಲಟ್ ಹಾಗೂ 18 ಜನ ಶಾಸಕರು ಬಂಡಾಯದ ಬಾವುಟ ಹಾರಿಸಿದ ನಂತರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಯಿತು. ಹೀಗಾಗಿ ಜುಲೈ 13ರಂದು ಶಾಸಕರು ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong>ವಿಧಾನಸಭೆ ಅಧಿವೇಶನ ನಡೆಸಲು ರಾಜ್ಯಪಾಲ ಕಲ್ರಾಜ್ ಮಿಶ್ರಾ ಅನುಮತಿ ನೀಡಿರುವ ಬೆನ್ನಲ್ಲೇ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಚುರುಕುಗೊಂಡಿವೆ.</p>.<p>ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿಷ್ಠ ಶಾಸಕರನ್ನು ಜೈಪುರ ಹೋಟೆಲ್ನಿಂದ ಜೈಸಲ್ಮೇರ್ನಲ್ಲಿರುವ ಹೋಟೆಲ್ಗೆ ಶುಕ್ರವಾರ ಸ್ಥಳಾಂತರಿಸಲು ಮುಖಂಡರು ಮುಂದಾಗಿದ್ದಾರೆ. ಆದರೆ, ಶಾಸಕರನ್ನು ಸ್ಥಳಾಂತರಿಲು ಕಾರಣ ಏನು ಎಂಬುದನ್ನು ಮೂಲಗಳು ಸ್ಪಷ್ಟಪಡಿಸಿಲ್ಲ.</p>.<p>ಶಾಸಕರನ್ನು ಸದ್ಯ ಜೈಪುರ–ದೆಹಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಐಷಾರಾಮಿ ಹೋಟೆಲ್ನಲ್ಲಿ ಇರಿಸಲಾಗಿದೆ. ಅಲ್ಲಿಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಗೆಹ್ಲೋಟ್ ಅವರು ಶಾಸಕರನ್ನು ಉದ್ದೇಶಿಸಿ ಮಾತನಾಡುವರು. ನಂತರ ಎಲ್ಲರನ್ನು ಜೈಸಲ್ಮೇರ್ನ ಹೋಟೆಲ್ಗೆ ಸ್ಥಳಾಂತರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.</p>.<p>ಸಚಿನ್ ಪೈಲಟ್ ಹಾಗೂ 18 ಜನ ಶಾಸಕರು ಬಂಡಾಯದ ಬಾವುಟ ಹಾರಿಸಿದ ನಂತರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಯಿತು. ಹೀಗಾಗಿ ಜುಲೈ 13ರಂದು ಶಾಸಕರು ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>